ಬ್ರೇಕಿಂಗ್ ನ್ಯೂಸ್
11-07-23 04:12 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ (IND vs WI) ನಾಳೆಯಿಂದ ಪ್ರಾರಂಭವಾಗಲಿದೆ. ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಭಾರತ 2 ಟೆಸ್ಟ್ ಸರಣಿಯನ್ನು ಆಡಲಿದೆ. ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಭಾರತ ತಂಡ ಈಗಾಗಲೇ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಡೊಮಿನಿಕಾವನ್ನು ತಲುಪಿದೆ. ಈಗಾಗಲೇ ಅಭ್ಯಾಸ ಪಂದ್ಯವನ್ನಾಡಿರುವ ಭಾರತ ಅಬ್ಬರಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025ರ ಭಾಗವಾಗಿ ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ.
ಕಳೆದ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡಿದ್ದ ಭಾರತ ತಂಡದಲ್ಲಿ ಹಲವು ಬದಲಾವಣೆಗಳಾಗಿದೆ. ಚೇತೇಶ್ವರ್ ಪೂಜಾರ ಹಾಗೂ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಈ ಕ್ರಮದಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಮೊದಲ ಬಾರಿಗೆ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಆಡಳಿತ ಮಂಡಳಿ ಅಂತಿಮ ತಂಡದತ್ತ ಗಮನ ಹರಿಸಿದೆ.


ಟೆಸ್ಟ್ ನಲ್ಲಿ ಮೂರನೇ ಸ್ಥಾನವೇ ಪ್ರಮುಖವಾದುದು ಎಂಬುದು ಗೊತ್ತಾಗಿದೆ. ಈ ಹಿಂದೆ ಆ ಸ್ಥಾನದಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ಗೆ ಬರುತ್ತಿದ್ದರು. ನಿವೃತ್ತಿಯ ನಂತರ ಚೇತೇಶ್ವರ ಪೂಜಾರ ಆ ಜಾಗದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಪೂಜಾರ ಅವರನ್ನು ಆಯ್ಕೆ ಮಾಡಿಲ್ಲ. ಈ ಕ್ರಮದಲ್ಲಿ ಮೂರನೇ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎಂಬ ಬಗ್ಗೆ ಕೋಚ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ಗಿಲ್ ಅವರನ್ನು ಮೂರನೇ ಸ್ಥಾನದಲ್ಲಿ ಆಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಮೊದಲ ಟೆಸ್ಟ್ನಲ್ಲಿ ಜೈಸ್ವಾಲ್ ಹಾಗೂ ರೋಹಿತ್ರನ್ನು ಓಪನರ್ಗಳಾಗಿ ಆಡಿಸಲು ಟೀಂ ಇಂಡಿಯಾ ಮುಂದಾಗಿರುವುದು ಗೊತ್ತೇ ಇದೆ. ಗಿಲ್ನನ್ನು ಒನ್ ಡೌನ್ನಲ್ಲಿ ಪರೀಕ್ಷಿಸುವ ಯೋಜನೆ ಇದೆ ಎಂಬ ವರದಿಗಳೂ ಇವೆ. ಆದರೆ, ಅಭಿಮಾನಿಗಳು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಇದರ ನಡುವೆ ಉಪನಾಯಕ ಅಜಿಂಕ್ಯ ರಹಾನೆಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯೂ ಇದೆ. ಪೂಜಾರ ಸ್ಥಾನವು ರಹಾನೆಗೆ ಸರಿಹೊಂದುತ್ತದೆ. ಟೀಂ ಇಂಡಿಯಾ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
IND vs WI 1st Test who will be Play at No 3 Position for Team India.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm