ಬ್ರೇಕಿಂಗ್ ನ್ಯೂಸ್
11-07-23 04:12 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ (IND vs WI) ನಾಳೆಯಿಂದ ಪ್ರಾರಂಭವಾಗಲಿದೆ. ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಭಾರತ 2 ಟೆಸ್ಟ್ ಸರಣಿಯನ್ನು ಆಡಲಿದೆ. ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಭಾರತ ತಂಡ ಈಗಾಗಲೇ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಡೊಮಿನಿಕಾವನ್ನು ತಲುಪಿದೆ. ಈಗಾಗಲೇ ಅಭ್ಯಾಸ ಪಂದ್ಯವನ್ನಾಡಿರುವ ಭಾರತ ಅಬ್ಬರಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025ರ ಭಾಗವಾಗಿ ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ.
ಕಳೆದ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡಿದ್ದ ಭಾರತ ತಂಡದಲ್ಲಿ ಹಲವು ಬದಲಾವಣೆಗಳಾಗಿದೆ. ಚೇತೇಶ್ವರ್ ಪೂಜಾರ ಹಾಗೂ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಈ ಕ್ರಮದಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಮೊದಲ ಬಾರಿಗೆ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಆಡಳಿತ ಮಂಡಳಿ ಅಂತಿಮ ತಂಡದತ್ತ ಗಮನ ಹರಿಸಿದೆ.


ಟೆಸ್ಟ್ ನಲ್ಲಿ ಮೂರನೇ ಸ್ಥಾನವೇ ಪ್ರಮುಖವಾದುದು ಎಂಬುದು ಗೊತ್ತಾಗಿದೆ. ಈ ಹಿಂದೆ ಆ ಸ್ಥಾನದಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ಗೆ ಬರುತ್ತಿದ್ದರು. ನಿವೃತ್ತಿಯ ನಂತರ ಚೇತೇಶ್ವರ ಪೂಜಾರ ಆ ಜಾಗದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಪೂಜಾರ ಅವರನ್ನು ಆಯ್ಕೆ ಮಾಡಿಲ್ಲ. ಈ ಕ್ರಮದಲ್ಲಿ ಮೂರನೇ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎಂಬ ಬಗ್ಗೆ ಕೋಚ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ಗಿಲ್ ಅವರನ್ನು ಮೂರನೇ ಸ್ಥಾನದಲ್ಲಿ ಆಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಮೊದಲ ಟೆಸ್ಟ್ನಲ್ಲಿ ಜೈಸ್ವಾಲ್ ಹಾಗೂ ರೋಹಿತ್ರನ್ನು ಓಪನರ್ಗಳಾಗಿ ಆಡಿಸಲು ಟೀಂ ಇಂಡಿಯಾ ಮುಂದಾಗಿರುವುದು ಗೊತ್ತೇ ಇದೆ. ಗಿಲ್ನನ್ನು ಒನ್ ಡೌನ್ನಲ್ಲಿ ಪರೀಕ್ಷಿಸುವ ಯೋಜನೆ ಇದೆ ಎಂಬ ವರದಿಗಳೂ ಇವೆ. ಆದರೆ, ಅಭಿಮಾನಿಗಳು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಇದರ ನಡುವೆ ಉಪನಾಯಕ ಅಜಿಂಕ್ಯ ರಹಾನೆಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯೂ ಇದೆ. ಪೂಜಾರ ಸ್ಥಾನವು ರಹಾನೆಗೆ ಸರಿಹೊಂದುತ್ತದೆ. ಟೀಂ ಇಂಡಿಯಾ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
IND vs WI 1st Test who will be Play at No 3 Position for Team India.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm