ಬ್ರೇಕಿಂಗ್ ನ್ಯೂಸ್
20-07-23 03:58 pm Source: News18 Kannada ಕ್ರೀಡೆ
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ಕೇವಲ ಮೂರೇ ದಿನಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎರಡು ಬಾರಿ ಆಲೌಟ್ ಮಾಡಿ ಸೂಪರ್ ಗೆಲುವು ಸಾಧಿಸಿತ್ತು.
![]()
ಐದು ದಿನಗಳ ವಿರಾಮದ ನಂತರ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಸಿದ್ಧವಾಗಿದೆ. ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯಲಿದೆ. ಈ ಪಂದ್ಯ ಜುಲೈ 20 ರಿಂದ 24ರ ವರೆಗೆ ನಡೆಯಲಿದೆ.
ಈ ಪಂದ್ಯ ಗೆದ್ದರೂ ಡ್ರಾ ಮಾಡಿಕೊಂಡರೂ ಭಾರತ ಸರಣಿ ಗೆಲುವು ದಾಖಲಿಸಿದೆ. ಮೊದಲ ಟೆಸ್ಟ್ನಲ್ಲಿ ಸ್ಪಿನ್ ಟ್ರ್ಯಾಕ್ ಮಾಡುವ ಮೂಲಕ ಬೆಲೆ ತೆರಬೇಕಾದ ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ಗೆ ಬೌನ್ಸಿ ಪಿಚ್ ಅನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ.

ಈ ಪಂದ್ಯದಲ್ಲಿ ಭಾರತ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕೆ ಇಳಿಯಲಿದೆ. ಮೊದಲ ಟೆಸ್ಟ್ನಲ್ಲಿ ಆಡಿದ ತಂಡವನ್ನೇ ಭಾರತ ಆಡುವ ಸಾಧ್ಯತೆ ಇದೆ. ಇದನ್ನು ನಾಯಕ ರೋಹಿತ್ ಶರ್ಮಾ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.
ಎರಡನೇ ಟೆಸ್ಟ್ನಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಿಲ್ಲ ಎಂದು ಅವರು ಹೇಳಿದರು. ಆದರೆ ಪಿಚ್ ನೋಡಿದ ಬಳಿಕ ಅಗತ್ಯಬಿದ್ದರೆ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಇದು ಸಂಭವಿಸುವ ಸಾಧ್ಯತೆಗಳು ತುಂಬಾ ಕಡಿಮೆ.

ಮೊದಲ ಟೆಸ್ಟ್ನಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿದೆ. ಚೊಚ್ಚಲ ಪಂದ್ಯದಲ್ಲೇ ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ್ದರು. ರೋಹಿತ್ ಮತ್ತು ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ನಂತರ ಕ್ರಮವಾಗಿ ಗಿಲ್, ಕೊಹ್ಲಿ, ರಹಾನೆ, ಇಶಾನ್ ಕಿಶನ್, ಜಡೇಜಾ ಮತ್ತು ಅಶ್ವಿನ್ ಇರಲಿದ್ದಾರೆ.
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ರೋಹಿತ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಶ್ವಿನ್, ಶಾರ್ದೂಲ್ ಠಾಕೂರ್, ಉನದ್ಕತ್, ಮೊಹಮ್ಮದ್ ಸಿರಾಜ್.
Ind vs WI 2nd test team India predicted playing xi.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm