ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.

ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.

ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.

ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm