ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.

ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.

ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.

ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm