ಬ್ರೇಕಿಂಗ್ ನ್ಯೂಸ್
03-08-23 04:09 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಇಂದು ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಟೀಂ ಇಂಡಿಯಾ ವಶಪಡಿಸಿಕೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರು ಈ ಸರಣಿಯಲ್ಲಿ ಆಯ್ಕೆ ಆಗದ ಕಾರಣದಿಂದಾಗಿ 3 ಆಟಗಾರರು ಟಿ20 ಪಂದ್ಯಗಳಿಗೆ ಪದಾರ್ಪಣೆ ಮಾಡಲಿದ್ದಾರೆ.
ಮುಖೇಶ್ ಕುಮಾರ್, ತಿಲಕ್ ವರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಹೊಸ ಮುಖಗಳಾಗಿ ಟಿ20 ತಂಡವನ್ನು ಸೇರಿಕೊಂಡಿದ್ದಾರೆ. ಈಗ ಈ ಮೂವರಲ್ಲಿ ಯಾರು ಪದಾರ್ಪಣೆ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ. ಒಂದು ವೇಳೆ ಹಾರ್ದಿಕ್ ಪಾಂಡ್ಯ ಯಶಸ್ವಿ ಜೈಸ್ವಾಲ್ಗೆ ಓಪನಿಂಗ್ ಮಾಡಲು ಅವಕಾಶ ನೀಡಿದರೆ, ಅವರು ಇಶಾನ್ ಕಿಶನ್ ಅಥವಾ ಶುಭಮನ್ ಗಿಲ್ ಅವರಲ್ಲಿ ಒಬ್ಬರನ್ನು ಕೂರಿಸಬೇಕು. ಮಧ್ಯಮ ಕ್ರಮಾಂಕದಲ್ಲಿ ಭಾರತವು ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರನ್ನು ಹೊಂದಿದ್ದು, ಅವರ ಮುಂದೆ ತಿಲಕ್ ವರ್ಮಾ ಅವರಿಗೆ ಅಷ್ಟೇನೂ ಅವಕಾಶ ಸಿಗುವುದಿಲ್ಲ.
ಟೀಂ ಇಂಡಿಯಾದ ಯುವ ಆಟಗಾರ ಮುಖೇಶ್ ಕುಮಾರ್ ಅವರ ಟೆಸ್ಟ್ ಮತ್ತು ಏಕದಿನ ಚೊಚ್ಚಲ ಪಂದ್ಯ ಅತ್ಯುತ್ತಮವಾಗಿತ್ತು. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 2 ವಿಕೆಟ್ ಉರುಳಿಸಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಅವರು 3 ವಿಕೆಟ್ ಪಡೆದರು. ಇಂತಹ ಪರಿಸ್ಥಿತಿಯಲ್ಲಿ ಅವರು ಮೊದಲ ಟಿ20 ಆಡುವುದು ಖಚಿತ ಎನಿಸುತ್ತಿದೆ.
ಟೀಂ ಇಂಡಿಯಾ ಸಂಭಾವ್ಯ ತಂಡ: ಇಶಾನ್ ಕಿಶನ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ/ಯಶಸ್ವಿ ಜೈಸ್ವಾಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಸಂಭಾವ್ಯ ತಂಡ: ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್, ಓಶನ್ ಥಾಮಸ್.
IND vs WI these 3 Players Ready for T20 International Debut.
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm