ಬ್ರೇಕಿಂಗ್ ನ್ಯೂಸ್
17-08-23 03:01 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 (Asia cup 2023) ಆರಂಭಕ್ಕೆ ಇನ್ನೇನು ಕೇವಲ ಎರಡು ವಾರಗಳು ಮಾತ್ರ ಬಾಕಿ ಉಳಿದಿದೆ. ಏಷ್ಯಾ ಕಪ್ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಬಾರಿಯ ಏಷ್ಯಾಕಪ್ಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ಈಗಾಗಲೇ ತಮ್ಮ ತಂಡಗಳನ್ನು ಪ್ರಕಟಿಸಿವೆ. ಭಾರತ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಇನ್ನೂ ಘೋಷಿಸಬೇಕಿದೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಪಂದ್ಯಗಳ ಕಾರಣ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲು ವಿಳಂಬವಾಗುತ್ತಿದೆ.
ಆದರೆ ಬಿಸಿಸಿಐ ಆಯ್ಕೆ ಸಮಿತಿ ಈಗಾಗಲೇ 17 ಸದಸ್ಯರ ತಂಡವನ್ನು ನಿರ್ಧರಿಸಿದೆ ಎಂಬ ವರದಿಗಳಿವೆ. ಇದರಲ್ಲಿ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಹೆಸರು ಕೂಡ ಸೇರಿದೆ ಎಂದು ಗೊತ್ತಾಗಿದೆ. ಆದರೆ ಅವರು ಫಿಟ್ನೆಸ್ ಸಾಧಿಸಬೇಕಿದೆ. ಈ 17 ಸದಸ್ಯರ ತಂಡದಲ್ಲಿ ಟಿ20 ಮಾದರಿಯಲ್ಲಿ ವಿಶ್ವದ ನಂಬರ್ 1 ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಸ್ಥಾನ ನೀಡಿಲ್ಲ ಎಂಬ ವರದಿಗಳಿವೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್ ಸಾಧಿಸಲು ವಿಫಲರಾದರೆ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ಸಿಗಬಹುದು ಎಂದು ವರದಿಯಾಗಿದೆ.



ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಹಿಟ್ ಆಗಿದ್ದ ತಿಲಕ್ ವರ್ಮಾ ಹೆಸರನ್ನು ಏಷ್ಯಾಕಪ್ ಗೆ ಪರಿಗಣಿಸುತ್ತಿಲ್ಲ ಎಂಬ ವರದಿಗಳಿವೆ. ಕೇವಲ ಒಂದು ಸರಣಿಯೊಂದಿಗೆ ಮೆಗಾ ಇವೆಂಟ್ನಲ್ಲಿ ಅವರಿಗೆ ಅವಕಾಶ ನೀಡಲು ಬಿಸಿಸಿಐ ಆಯ್ಕೆ ಸಮಿತಿಯು ಸಿದ್ಧವಾಗಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಹೊಸ ಹುಡುಗ ಮುಖೇಶ್ ಕುಮಾರ್ ಏಷ್ಯಾಕಪ್ ಗೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಬರುತ್ತಿದೆ. ಬುಮ್ರಾ, ಶಮಿ, ಸಿರಾಜ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್ ಜೊತೆಗೆ ಭಾರತದ ವೇಗಿ ಪಡೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.



ಯುಜ್ವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಸ್ಪಿನ್ನರ್ ಆಗಲಿದ್ದಾರೆ. ಇವರೊಂದಿಗೆ ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಆಲ್ ರೌಂಡರ್ ಸ್ಪಿನ್ ಆಗಲಿದ್ದಾರೆ. ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಲ್ ರೌಂಡರ್ ಆಗಲಿದ್ದಾರೆ. ರೋಹಿತ್ ಶರ್ಮಾ, ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಬ್ಯಾಟ್ಸ್ಮನ್ಗಳಾದರೆ ಕೆಎಲ್ ರಾಹುಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ಗಳಾಗಲಿದ್ದಾರೆ ಎಂದು ವರದಿಯಾಗಿದೆ ಏಷ್ಯಾಕಪ್ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಚಾಹಲ್, ಮೊಹಮ್ಮದ್ ಶಮಿ, ಮೊಹಮ್ದ್ ಸಿರಾಜ್, ಬುಮ್ರಾ, ಮುಖೇಶ್ ಕುಮಾರ್.
Suryakumar Yadav and Tilak Verma are likely to be Ruled Out of Team India from Asia Cup 2023.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm