ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm