ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm