ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.

ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.

ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್ವೆಲ್ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.

ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm