ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm