ಬ್ರೇಕಿಂಗ್ ನ್ಯೂಸ್
14-12-20 06:08 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 13: ಹೀರೋ ಇಂಡಿಯನ್ ಸೂಪರ್ ಲೀಗ್ ನ 26ನೇ ಪಂದ್ಯ ಗೋಲಿಲ್ಲದೆ ಡ್ರಾಗೊಂಡಿದೆ. ಚೆನ್ನೈಯಿನ್ ಎಫ್ ಸಿ ಹಾಗೂ ನಾರ್ಥ್ ಈಸ್ಟ್ ಯುನೈಟೆಡ್ ತಂಡಗಳು ಗೋಲು ಗಳಿಸುವಲ್ಲಿ ವಿಫಲವಾಗಿ ಅಂಕ ಹಂಚಿಕೊಂಡವು. ಒಂದು ಅಂಕದ ಸೇರ್ಪಡೆಯೊಂದಿಗೆ ನಾರ್ಥ್ ಈಸ್ಟ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿಯಿತು. ಆದರೆ ಚೆನ್ನೈಗೆ ಈ ರೀತಿಯ ಫಲಿತಾಂಶ ತೃಪ್ತಿ ತುರುವಂಥದ್ದಲ್ಲ. 66ನೇ ನಿಮಿಷದಲ್ಲಿ ಇಡ್ರಿಸಾ ಸಿಲ್ಲಾಗೆ ಸುಲಭವಾಗಿ ಗೋಲು ಗಳಿಸುವ ಅವಕಾಶವಿದ್ದಿತ್ತು, ಆದರೆ ಕ್ಷಿಪ್ರ ಗತಿಯಲ್ಲಿ ತೀರ್ಮಾನ ಕೈಗೊಂಡ ಕಾರಣ ಚೆಂಡು ಗೋಲ್ ಬಾಕ್ಸ್ ನಿಂದ ಹೊರ ಸಾಗಿತು.
ಗೋಲಿಲ್ಲದ ಪ್ರಥಮಾರ್ಧ: ಚೆಂಡಿನ ಮೇಲೆ ಹೆಚ್ಚು ಕಾಲ ತನ್ನ ನಿಯಂತ್ರಣವನ್ನು ಸಾಧಿಸಿ ಮೂರು ಬಾರಿ ಟಾರ್ಗೆಟ್ ಗೆ ಗುರಿ ಇಟ್ಟರೂ ಚೆನ್ನೈಯಿನ್ ತಂಡಕ್ಕೆ ಆತ್ಮವಿಶ್ವಾಸದ ಅಲೆಯಲ್ಲಿದ್ದ ನಾರ್ಥ್ ಈಸ್ಟ್ ಯುನೈಟೆಎಡ್ ವಿರುದ್ಧ ಗೋಲು ಗಳಿಸಲಾಗಲಿಲ್ಲ. ಚೆಂಡಿನ ಮೇಲೆ ಹೆಚ್ಚು ಕಾಲ ನಿಯಂತ್ರಣ ಸಾಧಿಸುವಲ್ಲಿ ವಿಫಲವಾದ ನಾರ್ಥ್ ಈಸ್ಟ್ ಕೂಡ ಎರಡು ಬಾರಿ ಟಾರ್ಗೆಟ್ ಗೆ ಗುರಿ ಇಟ್ಟಿತ್ತು ಆದರೆ ಗೋಲು ಗಳಿಸುವಲ್ಲಿ ವಿಫಲವಾಗಿತ್ತು.
ನ್ನೈಯಿನ್ ತಂಡಕ್ಕೆ ಗೋಲು ಗಳಿಸಬೇಕಾದ ಒತ್ತಡವಿದೆ. ಇತ್ತಂಡಗಳಿಗೂ 45 ನಿಮಿಷಗಳ ಆಟದಲ್ಲಿ ಉತ್ತಮವಾದ ಅವಕಾಶ ಸಿಗಲಿಲ್ಲ. ಚೆನ್ನೈಯಿನ್ ತಂಡಕ್ಕೆ ನಾರ್ಥ್ ಈಸ್ಟ್ ವಿರುದ್ಧ ಗೋಲು ಗಳಿಸಲು ಕಷ್ಟವಾಗಿದೆ ಎಂದರೆ ಮಾಜಿ ಚಾಂಪಿಯನ್ನರಲ್ಲಿ ಹೊಂದಾಣಿಕೆಯ ಕೊರತೆ ಇದೆ ಎಂದರೆ ತಪ್ಪಾಗಲಾರದು. ಏಕೆಂದರೆ ಚೆನ್ನೈ ಗೋಲು ಗಳಿಕೆಯಲ್ಲಿ ಕೇವಲ ಒಬ್ಬ ಆಟಗಾರನ ಮೇಲೆ ಅವಲಂಬಿತವಾದ ತಂಡವಲ್ಲ. ಸಮಗ್ರ ಹೋರಾಟ ನೀಡುವ ತಂಡವಾಗಿದೆ. ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್: ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಚೆನ್ನೈಯಿನ್ ಹಾಗೂ ನಾರ್ಥ್ ಈಸ್ಟ್ ತಂಡಗಳು ಮುಖಾಮುಖಿಯಾದವು. ಆಡಿರುವ ಐದು ಪಂದ್ಯಗಳಲ್ಲಿ ಎರಡು ಜಯ ಮತ್ತು ಮೂರು ಡ್ರಾ ಕಂಡಿರುವ ನಾರ್ಥ್ ಈಸ್ಟ್ ನಿಜವಾಗಿಯೂ ಚೆನ್ನೈಗಿಂತ ಬಲಿಷ್ಠವಾಗಿದೆ. ಗೆರಾರ್ಡ್ ನಸ್ ಪಡೆ ಇದುವರೆಗೂ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ತೋರಿರುವುದೇ ಆಟಗಾರರಲ್ಲಿ ಆತ್ಮವಿಶ್ವಾಸ ಮೂಡಲು ಪ್ರಮುಖ ಕಾರಣವಾಗಿದೆ. ಚೆಂಡಿನ ಮೇಲೆ ನಿಯಂತ್ರಣ ಸಾಧಿಸುವಲ್ಲಿ ನಾರ್ಥ್ ಈಸ್ಟ್ ಮೇಲುಗೈ ಸಾಧಿಸಿದೆ. ಐದು ಪಂದ್ಯಗಳಲ್ಲಿ ಒಟ್ಟು 8 ಗೋಲುಗಳನ್ನು ಗಳಿಸಿರುವ ನಾರ್ಥ್ ಈಸ್ಟ್ ಅತಿ ಹೆಚ್ಚು ಗೋಲು ಗಳಿಕೆಯಲ್ಲಿ ಮುಂಬೈ ಜತೆಯಲ್ಲಿ ಸಮಬಲ ಸಾಧಿಸಿದೆ.
ಇಡ್ರಿಸಾ ಸಿಲ್ಲಾ, ಕ್ಬೆಸಿ ಅಪ್ಪಿಯ್ಯ ಮತ್ತು ಲೂಯಿಸ್ ಮಚಾಡೊ ತಂಡಕ್ಕಾಗಿ ತಲಾ ಎರಡು ಗೋಲು ಗಳಿಸಿದ್ದಾರೆ. ಹಿಂದಿನ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಚೆನ್ನೈಯಿನ್ ಗಾಯದ ಕಾರಣ ಅನಿರುದ್ಧ್ ಥಾಪಾ ತಂಡದಲ್ಲಿ ಅನುಪಸ್ಥಿತಿ ತಂಡದ ಬಲವನ್ನು ಕುಗ್ಗಿಸುವಂತೆ ಮಾಡಿದೆ. ಈ ಪಂದ್ಯದಲ್ಲಿ ಅನಿರುದ್ಧ್ ಥಾಪಾ ಆಡುತ್ತಿರುವುದು ತಂಡದ ಮನೋಬಲವನ್ನು ಹೆಚ್ಚಿಸಿದೆ.ಋತುವಿನ ಆರಂಭವನ್ನು ಹೊರತುಪಡಿಸಿದರೆ ಚೆನ್ನೈಯಿನ್ ಆ ನಂತರ ಜಯದ ರುಚಿ ಕಂಡಿಲ್ಲ. ನಾಲ್ಕು ಪಂದ್ಯಗಳಲ್ಲಿ ತಂಡ ಮೂರು ಗೋಲುಗಳನ್ನು ಗಳಿಸಿತ್ತು, ಈಗ ತಂಡಕ್ಕೆ ಜಯದ ಅನಿವಾರ್ಯತೆ ಇದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm