ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.

ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.

ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am