ಬ್ರೇಕಿಂಗ್ ನ್ಯೂಸ್
15-12-20 04:17 pm Source: MYKHEL ಕ್ರೀಡೆ
ಗೋವಾ: ಜೆಮ್ಷೆಡ್ಪುರ ಎಫ್ ಸಿ ಪರ ನೆರಿಜಸ್ ವಾಸ್ಕಿಸ್ (9ನೇ ನಿಮಿಷ) ಹಾಗೂ ಮುಂಬೈ ಸಿಟಿ ಪರ ಬಾರ್ಥಲೋಮ್ಯೊ ಒಗ್ಬಚೆ (15ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಹೀರೋ ಇಂಡಿಯನ್ ಸೂಪರ್ ಲೀಗ್ ನ 28ನೇ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಿರೀಕ್ಷೆಯಂತೆ ಮುಂಬೈ ಸಿಟಿ ಹಾಗೂ ಜೆಮ್ಷೆಡ್ಪುರ ತಂಡಗಳ ನಡುವಿನ ಪ್ರಥಮಾರ್ಧ ಅತ್ಯಂತ ರೋಚಕವಾಗಿ ನಡೆಯಿತು. ಆಕ್ರಮಣಕಾರಿ ಆಟವಾಡಿದ ಇತ್ತಂಡಗಳಿಗೆ ಸಮಬಲದ ಯಶಸ್ಸು.
ಬಾರ್ಥಲೋಮ್ಯೋ ಒಗ್ಬಚೆ ಮಾಡಿದ ಪ್ರಮಾದದಿಂದಾಗಿ ಜೆಎಫ್ ಸಿ 9ನೇ ನಿಮಿಷದಲ್ಲಿ ಗೊಲು ಗಳಿಸಿ ಮುನ್ನಡೆಯಿತು. ನೆರಿಜಸ್ ವಾಸ್ಕಿಸ್ ಗಳಿಸಿ ಗೋಲು ತಂಡಕ್ಕೆ ಮುನ್ನಡೆ ತಂದುಕೊಟ್ಟಿತು. ಪಂದ್ಯದ ಆರಂಭದಲ್ಲಿ ಸಾಮಾನ್ಯ ಪಾಸ್ ಗಳು ಉದಾಸೀನದಿಂದ ಕೂಡಿರುತ್ತದೆ. ಒಗ್ಬಚೆ ನೀಡಿದ ಪಾಸ್ ಅದೇ ರೀತಿಯಿಂದ ಕೂಡಿತ್ತು.
ಜಾಕಿಚಾಂದ್ ಸಿಂಗ್ ಈ ಪಾಸನ್ನು ನಿಯಂತ್ರಿಸಿದರು. ವೇಗದಲ್ಲಿ ಚೆಂಡನ್ನು ಮುನ್ನಡೆಸಿದ ಸಿಂಗ್ ಪೆನಾಲ್ಟಿ ವಲಯಕ್ಕೆ ಚೆಂಡನ್ನು ಪಾಸ್ ಮಾಡಿದರು. ಸಮಯ ಹಾಗೂ ಅಂತರ ಎರಡರ ಸದುಪಯೋಗ ಪಡೆದ ವಾಸ್ಕಿಸ್ ಸುಲಭವಾಗಿ ಗೋಲು ಗಳಿಸಿದರು.
ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ ಜೆಎಫ್ ಸಿ ಯ ಈ ಮುನ್ನಡೆಯ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಜೆಎಫ್ ಸಿ ಗೋಲು ಗಳಿಸುವಲ್ಲಿ ಕಾರಣರಾಗಿದ್ದ ಒಗ್ಬಚೆ ತಮ್ಮ ತಂಡಕ್ಕೆ ನೆರವಾಗಿ ಆ ನೋವನ್ನು ಕೂಡಲೇ ಮರೆಯುವಂತೆ ಮಾಡಿದರು. ಲೆ ಫ್ರಾಂಡೆ ಅವರ ಕಾರ್ನರ್ ಕಿಕ್ ಬಿಪಿನ್ ಸಿಂಗ್ ಅವರ ನಿಯಂತ್ರಣಕ್ಕೆ ಸಿಕ್ಕಿತು. ಅವರು ಚೆಂಡನ್ನು ಬಾರ್ಥಲೋಮ್ಯೊ ಒಗ್ಬಚೆಗೆ ನೀಡಿದರು. ಒಗ್ಬಚೆ ಎದುರಾಳಿ ತಂಡದ ಗೋಲ್ ಕೀಪರ್ ಟಿ ಪಿ ರೆಹನೇಶ್ ಅವರನ್ನು ವಂಚಿಸುವಲ್ಲಿ ಸಫಲರಾದರು. ಪಂದ್ಯ 1-1ರಲ್ಲಿ ಸಮಬಲಗೊಂಡಿತು. ಐಟರ್ ಮನ್ರಾಯ್ ಅವರು ಎರಡನೇ ಬಾರಿಗೆ ರೆಡ್ ಹಳದಿ ಕಾರ್ಡ್ ಗಳಿಸಿ ರೆಡ್ ಕಾರ್ಡ್ ಮೂಲಕ ಅಂಗಣದಿಂದ ಹೊರನಡೆದದ್ದು ಟಾಟಾ ಪಡೆಗೆ ತುಂಬಲಾರದ ನಷ್ಟವಾಯಿತು. ಕೇವಲ 10 ಮಂದಿ ಆಟಗಾರರಿದ್ದರೂ ಜೆಎಫ್ ಸಿ ಉತ್ತಮ ರೀತಿಯಲ್ಲಿ ಹೋರಾಟ ನೀಡಿತು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm