ಬ್ರೇಕಿಂಗ್ ನ್ಯೂಸ್
16-12-20 02:39 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಅಡಿಲೇಡ್ನಲ್ಲಿ ಈ ಪಂದ್ಯ ಆರಂಭವಾಗಲಿದ್ದು ಈ ಪಂದ್ಯ ಡೇ-ನೈಟ್ ಪಂದ್ಯವಾಗಿ ಸಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ 11 ಆಟಗಾರರ ಪಟ್ಟಿಯನ್ನು ಬಿಸಿಸಿಐ ಘೋಷಿಸಿದೆ.
ಕೋಹ್ಲಿ ನೇತೃತ್ವದ ಈ ತಂಡದ ಆರಂಭಿಕ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಮಯಾಂಕ್ ಅಗರ್ವಾಲ್ ಜೊತೆಗೆ ಪೃಥ್ವಿ ಶಾ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ಗೆ ಈ ತಂಡದಲ್ಲಿ ನಿರಾಸೆ ಉಂಟಾಗಿದೆ.
ಆಡುವ ಬಳಗದಲ್ಲಿಲ್ಲ ರಾಹುಲ್ ಕೆಎಲ್ ರಾಹುಲ್
ಮಯಾಂಕ್ ಅಗರ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿತ್ತು. ಆದರೆ ಈ ತಂಡದಲ್ಲಿ ಕೆಎಲ್ ರಾಹುಲ್ ಅವರನ್ನು ಹೊರಗಿಡಲಾಗಿದೆ. ಸೀಮಿತ ಓವರ್ಗಳಲ್ಲಿ ಅದ್ಭುತ ಫಾರ್ಮ್ನಲ್ಲಿರುವ ರಾಹುಲ್ ಟೆಸ್ಟ್ನಲ್ಲಿ ಸುದೀರ್ಘ ಸಮಯದಿಂದ ಅವಕಾಶವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.
ಅಗ್ರ ಹಾಗೂ ಮಧ್ಯಮ ಕ್ರಮಾಂಕ
ಅಗ್ರ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಚೇತೇಶ್ವರ್ ಪೂಜಾರ ಸಾಥ್ ನೀಡಲಿದ್ದಾರೆ. ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಾಹ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ವಿಕೆಟ್ ಕೀಪಿಂಗ್ಗೆ ವಿಚಾರವಾಗಿ ಪಂತ್ ಹಾಗೂ ಸಾಹಾ ಮಧ್ಯೆ ಯಾರ ಎಂಬ ಪ್ರಶ್ನೆಗೂ ಸಾಹಾ ಅವರೇ ಮೊದಲ ಆಯ್ಕೆಯಾಗಿದ್ದಾರೆ.
ಬೌಲಿಂಗ್ ವಿಭಾಗ
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾಗೆ ಉಮೇಶ್ ಯಾದವ್ ಮೂರನೇ ವೇಗಿಯಾಗಿ ಸಾಥ್ ನೀಡಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ತಂಡದಲ್ಲಿರುವ 11 ಕ್ರಿಕೆಟಿಗರೂ ಕೂಡ ಬಲಗೈ ಆಟಗಾರರಾಗಿದ್ದಾರೆ.
ಸಂಪೂರ್ಣ ಆಟಗಾರರ ಪಟ್ಟಿ
ಟೀಮ್ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ
This News Article is a Copy of MYKHEL
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm