ಬ್ರೇಕಿಂಗ್ ನ್ಯೂಸ್
17-12-20 02:55 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 17: ಪ್ರತಿಯೊಂದು ಪಂದ್ಯದಲ್ಲೂ ಗೋಲು ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುತ್ತಿದ್ದ ರಾಯ್ ಕೃಷ್ಣ ಗೋವಾ ವಿರುದ್ಧದ ಪಂದ್ಯದಲ್ಲೂ ಪೆನಾಲ್ಟಿ ಮೂಲಕ ಗೋಲು ಗಳಿಸಿ 1-0 ಅಂತರದ ಜಯಕ್ಕೆ ಕಾರಣರಾದರು. ಇದರೊಂದಿಗೆ ಪ್ರತಿ ಬಾರಿಯೂ ದ್ವಿತಿಯಾರ್ಧದಲ್ಲಿ ಗೋಲು ಗಳಿಸುವ ಎಟಿಕೆಎಂಬಿ ಮತ್ತೊಮ್ಮೆ ಯಶಸ್ಸು ಕಂಡಿತು. ಈ ಜಯದೊಂದಿಗೆ ಎಟಿಕೆಎಂಬಿ ಅಂಕ
ಉತ್ತಮ ಆಟಗಾರರಿಂದ ಕೂಡಿದ ತಂಡಗಳೆರಡು ಪರಸ್ಪರ ಮುಖಾಮುಖಿಯಾದಾಗ ಅಲ್ಲಿ ಗೋಲಿಗೆ ಅವಕಾಶ ಕಡಿಮೆ ಇರುತ್ತದೆ ಎಂಬುದಕ್ಕೆ ಎಟಿಕೆ ಮೂಹನ್ ಬಾಗನ್ ಮತ್ತು ಎಫ್ ಸಿ ಗೋವಾ ನಡುವಿನ ಪಂದ್ಯದ ಪ್ರಥಮಾರ್ಧ ಸಾಕ್ಷಿಯಾಯಿತು. ಈ ಮೂಲಕ ಎಟಿಕೆಎಂಬಿ ಮತ್ತೊಮ್ಮೆ ಪ್ರಥಮಾರ್ಧದಲ್ಲಿ ಗೋಲು ಗಳಿಸುವಲ್ಲಿ ವಿಫಲವಾಯಿತು.
ಆರಂಭದಲ್ಲೇ ಎಟಿಕೆಎಂಬಿ ಆಕ್ರಮಣಕಾರಿ ಆಟಕ್ಕೆ ಮನಮಾಡಿತು ಪರಿಣಾಮ ತಿರಿ ಮತ್ತು ಡೇವಿಡ್ ವಿಲಿಯಮ್ಸ್ ಗೆ ಹಳದಿ ಕಾರ್ಡಿನ ಫಲ. ಎಟಿಕೆ ಮೋಹನ್ ಬಾಗನ್ ತಂಡಕ್ಕೆ ಎರಡು ಬಾರಿ ಫ್ರೀ ಕಿಕ್ ಅವಕಾಶ ಸಿಕ್ಕಿತ್ತು. ಆದರೆ ಡೇವಿಡ್ ವಿಲಿಯಮ್ಸ್ ಅದರ ಸದುಪಯೋಗ ಪಡೆಯುವಲ್ಲಿ ವಿಫಲವಾದರು. ಗೋವಾಕ್ಕೆ ಸಿಕ್ಕಿದ ಅವಕಾಶ ಕಡಿಮೆ. ಒಂದು ನಿಮಿಷದ ವಿರಾಮದ ನಂತರವೂ ಡೇವಿಡ್ ವಿಲಿಯಮ್ಸ್ ಗೆ ಅದ್ಭುತ ಗೋಲು ಗಳಿಸುವ ಅವಕಾಶ ಸಿಕ್ಕಿತ್ತು. ಆದರೆ ಅದೃಷ್ಟ ಇರಲಿಲ್ಲ. ತುಳಿದ ಚೆಂಡು ಗೋಲ್ ಕೀಪರ್ ನನ್ನು ವಂಚಿಸಿದರೂ ಗೋಲ್ ಬಾಕ್ಸ್ ನ ಕಂಬಕ್ಕೆ ಬಡೆದು ಹೊರ ಸಾಗಿತು. ಇದರೊಂದಿಗೆ ಪ್ರಥಮಾರ್ಧ ಗೋಲಿಲ್ಲದೆ ಕೊನೆಗಗೊಂಡಿತು.
ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಬಲಿಷ್ಠರೆನಿಸಿಕೊಂಡಿರುವ ತಂಡಗಳಾದ ಎಫ್ ಸಿ ಗೋವಾ ಹಾಗೂ ಎಟಿಕೆ ಮೂಹನ್ ಬಾಗನ್ ತಂಡಗಳು ಮುಖಾಮುಖಿಯಾದವು. ಹಿಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸಲು ವಿಫಲವಾಗಿರುವ ಎಟಿಕೆ ಇಲ್ಲಿ ಗೆಲ್ಲುವ ಆತ್ಮವಿಶ್ವಾಸ ಹೊಂದಿದೆ. ಆತಿಥೇಯ ಎಟಿಕೆಎಂಬಿ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಉತ್ತಮ ರೀತಿಯಲ್ಲೇ ಋತುವನ್ನು ಆರಂಭಿಸಿತ್ತು. ಆದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಅಗ್ರ ಸ್ಥಾನದಿಂದ ಕುಸಿಯಿತು. ಪ್ರಥಮಾರ್ಧದಲ್ಲಿ ಕೋಲ್ಕೊತಾ ಮೂಲದ ತಂಡ ಇದುವರೆಗೆ ನಡೆದ ಐದು ಪಂದ್ಯಗಳಲ್ಲಿ ಗೋಲು ಗಳಿಸಿರಲಿಲ್ಲ. ಗಳಿಸಿದ ಎಲ್ಲಾ ಗೋಲುಗಳು ದ್ವಿತಿಯಾರ್ಧದಲ್ಲೇ ದಾಖಲಾದವು. ಇಂದಿನ ಪಂದ್ಯದಲ್ಲಿ ಎಟಿಕೆಎಂಬಿ ದ್ವಿತಿಯಾರ್ಧದಲ್ಲೇ ಎದುರಾಳಿ ತಂಡಕ್ಕೆ ಹೆಚ್ಚು ಗೋಲುಗಳನ್ನು ನೀಡಿರುವ ತಂಡದ ವಿರುದ್ಧ ಆಡುತ್ತಿದೆ
This News Article is a Copy of MYKHEL
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am