ಬ್ರೇಕಿಂಗ್ ನ್ಯೂಸ್
18-12-20 02:44 pm Source: MYKHEL ಕ್ರೀಡೆ
ಕೆಎಲ್ ರಾಹುಲ್ ಕಳೆದ ಎರಡ್ಮೂರು ವರ್ಷಗಳಿಂದ ಭಾರತದ ಪ್ರಮುಖ ಬ್ಯಾಟ್ಸ್ಮನ್ ಆಗಿದ್ದಾರೆ. ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ತಂಡದ ಮುಖ್ಯ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಂಡಕ್ಕೆ ಅನುಕೂಲವಾಗುವ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯಲು ಶಕ್ತವಾಗಿರುವ ರಾಹುಲ್ ನಾಯಕ ವಿರಾಟ್ ಕೊಹ್ಲಿಗೆ ಆಪತ್ಬಾಂಧವನಂತಾಗಿದ್ದಾರೆ. ಆರಂಭಿಕನಾಗಿ ಕಣ್ಕಕಿಳಿಯುವುದರಿಂದ ಹಿಡಿದು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲು ಕೂಡ ರಾಹುಲ್ ಸೈ ಎನಿಸಿಕೊಂಡಿದ್ದಾರೆ. 2020 ಕೆಎಲ್ ರಾಹುಲ್ ಪರವಾಗಿ ಕೆಎಲ್ ರಾಹುಲ್ಗೆ ಹೆಚ್ಚು ಸ್ಮರಣೀಯ ವರ್ಷವೆನಿಸಿಕೊಂಡಿದೆ. ಅದಕ್ಕೆ ಕಾರಣ ರಾಹುಲ್ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ನೀಡಿದ ಅದ್ಭುತ ಪ್ರದರ್ಶನ.
ಈ ವರ್ಷದ ಬಹುತೇಕ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದುಹೋದರೂ ಇದ್ದ ಅವಕಾಶದಲ್ಲಿ ರಾಹುಲ್ ಟೀಮ್ ಇಂಡಿಯಾ ಪರವಾಗಿ ಶ್ರೇಷ್ಠ ಆಟವನ್ನು ಪ್ರದರ್ಶಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲೂ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರಾಹುಲ್ ಉತ್ತಮ ಆಟವನ್ನು ಪ್ರದರ್ಶಿಸಿದ್ದಾರೆ. ಆದರೆ ಸದ್ಯ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಟೀಮ್ ಇಂಡಿಯಾ ಪರವಾಗಿ 2020ರ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿದ್ದಾರೆ ಕೆಎಲ್ ರಾಹುಲ್. 9 ಏಕದಿನ ಪಂದ್ಯಗಳನ್ನು ಆಡಿರುವ ರಾಹುಲ್ 443 ರನ್ ಬಾರಿಸಿದ್ದಾರೆ. ಈ ವರ್ಷ ಅವರು ಏಕದಿನ ಕ್ರಿಕೆಟ್ನಲ್ಲಿ 55.4 ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ.
ಈ ವರ್ಷದಲ್ಲಿ ಕೆಎಲ್ ರಾಹುಲ್ ಏಕದಿನ ಕ್ರಿಕೆಟ್ನಲ್ಲಿ ಒಂದು ಶತಕವನ್ನು ಸಿಡಿಸಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 112 ರನ್ ಗಳಿಸಿರುವುದು ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರವಾಗಿ ಈ ವರ್ಷದ ಎರಡನೇ ಹೈಯೆಸ್ಟ್ ರನ್ ಎನಿಸಿಕೊಂಡಿದೆ. ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ಏಕದಿನ ಕ್ರಿಕೆಟ್ನಲ್ಲಿ ಹಾಗೂ ಟಿ20 ಕ್ರಿಕೆಟ್ನಲ್ಲಿ ಭಾರತದ ಪರವಾಹಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಯೂ ರಾಹುಲ್ ಪಾಲಾಗಿದೆ. ಏಕದಿನ ಕ್ರಿಕೆಟ್ನಲ್ಲಿ 16 ಸಿಕ್ಸರ್ ಬಾರಿಸಿರುವ ರಾಹುಲ್ ಟಿ20ಯಲ್ಲಿ ಈ ವರ್ಷ 13 ಸಿಕ್ಸರ್ ಬಾರಿಸಿದ್ದಾರೆ.
This News Article is a Copy of MYKHEL
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm