ಬ್ರೇಕಿಂಗ್ ನ್ಯೂಸ್
22-12-20 03:11 pm Source: MYKHEL ಕ್ರೀಡೆ
ಕೊಪ್ಪಳ, ಡಿ.22: ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ (ಗುರುತುದಾರರು) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ ತರಬೇತಿಗೆ ಕೇಂದ್ರ ಕಛೇರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನರು ಡಿ. 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಇಲಾಖೆ ವತಿಯಿಂದ ಕ್ರೀಡಾಶಾಲೆ ಕೂಡಿಗೆ,ಕುಶಾಲ್ ನಗರ, ಕೊಡಗು ಜಿಲ್ಲೆಯಲ್ಲಿ ಆಯೋಜಿಸುತ್ತಾರೆ. ತರಬೇತಿಯು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುತ್ತದೆ. ಯುವತಿಯರ ಸಂಖ್ಯೆಯನ್ನು ಆಧರಿಸಿ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಆಸಕ್ತ ಯುವಜನರು ತರಬೇತಿಯ ನಿಗದಿತ ನಮೂನೆ ಅರ್ಜಿಗಳನ್ನು ಕಛೇರಿಯಿಂದ ಪಡೆಯಬೇಕು. ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.(ಆರ್.ಡಿ.ನಂಬರ್ ಇರುವ ಪ್ರಮಾಣ ಪತ್ರ). ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕ್ರೀಡಾ ಅಂಕಣ ಗುರುತುದಾರರು ಕನಿಷ್ಠ 7ನೇ ತರಗತಿ ಓದಿರಬೇಕು. ಅರ್ಜಿದಾರರು ಸ್ವಯಂ ಧೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು ಸದರಿ ಪ್ರತಿ ಲಗತ್ತಿಸುವುದು. ಅರ್ಜಿದಾರರು ದೈಹಿಕವಾಗಿ ಸಧೃಡ ಹಾಗೂ ಚಟುವಟಿಕೆಯಿಂದ ಕೂಡಿದವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm