ಬ್ರೇಕಿಂಗ್ ನ್ಯೂಸ್
23-12-20 02:33 pm Source: MYKHEL Madhukara Shetty ಕ್ರೀಡೆ
ಗುರುಗ್ರಾಮ್, ಡಿ.23 : ಟೀಮ್ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಪ್ರೇಯಸಿ ಧನಶ್ರೀ ವರ್ಮಾ ಜೊತೆಗೆ ಗುರುಗ್ರಾಮ್ನಲ್ಲಿ ಡಿಸೆಂಬರ್ 22ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಗ್ರಾಮ್ನ ಕರ್ಮ ಲೇಕ್ ರೆಸಾರ್ಟ್ನಲ್ಲಿ ಆಪ್ತ ವಲಯದ ಸಮ್ಮುಖದಲ್ಲಿ ಈ ಮದುವೆ ಕಾರ್ಯಕ್ರಮ ನಡೆದಿದೆ.
ಮದುವೆ ಕಾರ್ಯಕ್ರಮದ ಫೋಟೋಗಳನ್ನು ಯುಜುವೇಂದ್ರ ಚಾಹಲ್ ಹಾಗೂ ಧನಶ್ರೀ ವರ್ಮಾ ಇಬ್ಬರೂ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳೂ ವೈರಲ್ ಆಗುತ್ತಿದೆ. ನವ ದಂಪತಿಗಳಿಗೆ ಅಭಿಮಾನಿಗಳು ಶುಭಾಶಯಗಳನ್ನು ಸುರಿಮಳೆ ಹರಿಸುತ್ತಿದ್ದಾರೆ. ಕಡು ಕೆಂಪು ಬಣ್ಣದ ಲೆಹಂಗಾದಲ್ಲಿ ಧನಶ್ರೀ ಕಂಗೊಳಿಸುತ್ತಿದ್ದರೆ ಯುಜುವೇಂದ್ರ ಚಾಹಲ್ ಶೇರ್ವಾನಿ ಹಾಗೂ ಟರ್ಬನ್ ತೊಟ್ಟು ಮದುಮಗನಾಗಿ ಮಿಂಚುತ್ತಿದ್ದಾರೆ.


ಧನಶ್ರೀ ವರ್ಮಾ ಡಾನ್ಸ್ ಕೊರಿಯೋಗ್ರಾಫರ್ ಆಗಿ ಖ್ಯಾತರಾಗಿದ್ದು ಲಾಕ್ಡೌನ್ ಸಂದರ್ಭದಲ್ಲಿ ಈ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಈಗ ಮದುವೆಯ ಹಂತಕ್ಕೆ ತಲುಪಿದೆ. ಲಾಕ್ಡೌನ್ ಸಂದರ್ಭದಲ್ಲಿ ಟಿಕ್ಟಾಕ್ನಲ್ಲಿ ನೃತ್ಯಗಳನ್ನು ಮಾಡುತ್ತಾ ಚಾಹಲ್ ಖ್ಯಾತರಾಗಿದ್ದರು. ಈ ಸಂದರ್ಭದಲ್ಲಿ ನೃತ್ಯಾಭ್ಯಾಸಕ್ಕಾಗಿ ಧನಶ್ರೀ ಅವರನ್ನು ಚಾಹಲ್ ಸಂಪರ್ಕಿಸಿದ್ದು ಹೀಗೆ ಗುರು ಶಿಷ್ಯರಾಗಿ ಆರಂಭವಾದ ಈ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು ಎಂದು ಧನಶ್ರೀ ವರ್ಮಾ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.
ಯುಜವೇಂದ್ರ ಚಾಹಲ್ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ಗಳ ಸರಣಿಯ ಭಾಗವಾಗಿದ್ದರು. ಸೀಮಿತ ಓವರ್ಗಳ ಸರಣಿ ಅಂತ್ಯವಾದ ಬಳಿಕ ಚಾಹಲ್ ಭಾರತಕ್ಕೆ ಮರಳಿದ್ದು ಮದುವೆಯ ಸಿದ್ಧತೆಯನ್ನು ನಡೆಸಿದ್ದರು. ಮಂಗಳವಾರದಂದು ಚಾಹಲ್ ಹಾಗೂ ಧನಶ್ರೀ ಮದುವೆಯ ಬಂಧನಕ್ಕೆ ಒಳಗಾಗಿದ್ದಾರೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಯುಜುವೇಂದ್ರ ಚಾಹಲ್ ಹಾಗೂ ಧನಶ್ರಿ ರೋಕಾ ಕಾರ್ಯಕ್ರಮದ ಮೂಲಕ ತಮ್ಮ ಮದುವೆಯ ನಿರ್ಧಾರವನ್ನು ಬಹಿರಂಗ ಪಡಿಸಿದ್ದರು. ಐಪಿಎಲ್ ಸಂದರ್ಭದಲ್ಲಿ ಧನಶ್ರೀ ಯುಎಇಗೆ ತೆರಳಿ ಚಾಹಲ್ಗೆ ಸಾಥ್ ನೀಡಿದ್ದರು.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm