ಬ್ರೇಕಿಂಗ್ ನ್ಯೂಸ್
24-08-25 07:00 pm HK News Desk ಕ್ರೀಡೆ
ಅಹ್ಮದಾಬಾದ್, ಆ.24 : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಸ್ಪೆಷಲಿಸ್ಟ್ ಆಟಗಾರ, ರಾಹುಲ್ ದ್ರಾವಿಡ್ ಬಳಿಕ ಭಾರತ ಟೆಸ್ಟ್ ತಂಡದ ಬೆನ್ನೆಲುಬು ಎನಿಸಿದ್ದ ಚೇತೇಶ್ವರ ಪೂಜಾರ ಎಲ್ಲ ಪ್ರಕಾರದ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ಪೂಜಾರ ಭಾರತದ ಪರ 2023ರ ವಿಶ್ವ ಟೆಸ್ಟ್ ಸರಣಿಯ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿ ಆಡಿದ್ದರು. ಆ ಬಳಿಕ ಅವರನ್ನು ತಂಡಕ್ಕೆ ಪರಿಗಣಿಸಿರಲಿಲ್ಲ. ಎರಡು ವರ್ಷಗಳಿಂದ ಟೆಸ್ಟ್ ತಂಡದಲ್ಲಿ ಆಡಿರದಿದ್ದರೂ ಇತ್ತೀಚೆಗೆ ಟೆಸ್ಟ್ ತಂಡಕ್ಕೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಅವರ ಸಾಲಿಗೆ ಪೂಜಾರ ಸೇರಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಜೆರ್ಸಿ ಧರಿಸಿ ಆಡಿದ್ದು, ಭಾರತೀಯ ಜೆರ್ಸಿಯಲ್ಲಿ ರಾಷ್ಟ್ರಗೀತೆ ಹಾಡಿದ್ದು ಸ್ಮರಣೀಯ ಕ್ಷಣಗಳು. ಅದನ್ನು ಪದಗಳಲ್ಲಿ ವರ್ಣಿಸುವುದು ಕಷ್ಟ. ಆದರೆ ಎಲ್ಲ ಒಳ್ಳೆಯ ಸಂಗತಿಗಳಿಗೆ ಒಂದು ಅಂತ್ಯ ಇದ್ದೇ ಇರುತ್ತದೆ ಎಂದು ಪೂಜಾರ ತಮ್ಮ ನಿವೃತ್ತಿಯ ಸಂದೇಶದಲ್ಲಿ ತಿಳಿಸಿದ್ದಾರೆ.
2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ, ಭಾರತದ ಪರ 103 ಟೆಸ್ಟ್ ಪಂದ್ಯ ಆಡಿರುವ ಪೂಜಾರ, 5 ಏಕದಿನ ಪಂದ್ಯಗಳಲ್ಲೂ ಭಾರತವನ್ನು ಪ್ರತಿನಿಧಿಸಿದ್ದಾರೆ. ರಾಹುಲ್ ದ್ರಾವಿಡ್ ಬಳಿಕ ಮೂರನೇ ಕ್ರಮಾಂಕದ ಸ್ಥಾನ ತುಂಬಿದ ಪೂಜಾರ, ಟೆಸ್ಟ್ ನಲ್ಲಿ 43.60ರ ಸರಾಸರಿಯಲ್ಲಿ 7195 ರನ್ ಬಾರಿಸಿದ್ದು, 19 ಶತಕ, 35 ಅರ್ಧ ಶತಕಗಳನ್ನು ಬಾರಿಸಿದ್ದರು. ಅಫಘಾನಿಸ್ತಾನ ಒಂದನ್ನು ಬಿಟ್ಟು ಟೆಸ್ಟ್ ಆಡುವ ಎಲ್ಲ ದೇಶಗಳ ವಿರುದ್ಧವೂ ಶತಕ ಬಾರಿಸಿದ ಹಿರಿಮೆ ಇವರದ್ದು. ಅದರಲ್ಲೂ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ತಲಾ 5, ಶ್ರೀಲಂಕಾ ವಿರುದ್ಧ ನಾಲ್ಕು ಶತಕ ಬಾರಿಸಿದ್ದರು. ಏಕದಿನ ಕ್ರಿಕೆಟ್ ನಲ್ಲಿ 51 ರನ್ ಅಷ್ಟೇ ಮಾಡಿದ್ದರು. ಐಪಿಎಲ್ ನಲ್ಲಿ ಕೆಕೆಆರ್, ಆರ್ ಸಿ ಬಿ ಮತ್ತು ಪಂಜಾಬ್ ತಂಡದ ಪರ ಪೂಜಾರ ಆಡಿದ್ದರು.
India’s Test cricket specialist Cheteshwar Pujara, widely regarded as the backbone of the Indian Test team after Rahul Dravid, has officially announced his retirement from all forms of cricket. With an emotional message, the 37-year-old bid farewell to the sport, stating, "All good things must come to an end."
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm