ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am