ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm