ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm