ಬ್ರೇಕಿಂಗ್ ನ್ಯೂಸ್
02-01-21 11:48 am Source: MYKHEL Sadashiva ಕ್ರೀಡೆ
ಸಿಡ್ನಿ, ಜ.2: ಆಸ್ಟ್ರೇಲಿಯಾ ಪ್ರವಾಸ ಸರಣಿಗಾಗಿ ಟೀಮ್ ಇಂಡಿಯಾ ಸೇರಿಕೊಂಡಿರುವ ಭಾರತದ ಅನುಭವಿ ಬ್ಯಾಟ್ಸ್ಮನ್ ರೋಹಿತ್ ಶರ್ಮಾಗೆ ಉಪನಾಯಕನ ಸ್ಥಾನ ಲಭಿಸಿದೆ. ಸರಣಿಯಿಂದ ಹೊರ ಬಿದ್ದಿರುವ ಟೆಸ್ಟ್ ಸ್ಪೆಷಾಲಿಸ್ಟ್ ಚೇತೇಶ್ವರ ಪೂಜಾರ ಬದಲಿಗೆ ಉಪನಾಯಕ ಜವಾಬ್ದಾರಿ ಶರ್ಮಾ ವಹಿಸಿಕೊಳ್ಳಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಇನ್ನಷ್ಟು ಕುತೂಹಲ ಮೂಡಿಸಿದೆ.
'ಹಿಟ್ಮ್ಯಾನ್' ರೋಹಿತ್ ಶರ್ಮಾ ಸೇರಿಕೊಂಡಿರುವುದು ಭಾರತ ತಂಡಕ್ಕೆ ಆನೆ ಬಲ ತಂದಿದೆ. ಹಾಗಂತ ರೋಹಿತ್ ಬ್ಯಾಟಿಂಗ್ ಮಾಡುವ ಬಗ್ಗೆ ಹೊಸದೊಂದು ಗೊಂದಲ ಶುರುವಾಗಿದೆ. ಅದು ಶರ್ಮಾ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ. ರೋಹಿತ್ ಆರಂಭಿಕರಾಗಿ ಆಡಬೇಕೋ ಬೇಡವೋ ಎನ್ನುವ ಬಗ್ಗೆ.
ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಡಿಸೆಂಬರ್ 7ರ ಗುರುವಾರ 5 AMಗೆ ಆರಂಭಗೊಳ್ಳಲಿದೆ.

ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್
ನಿಯಮಿತ ಓವರ್ಗಳ ಕ್ರಿಕೆಟ್ನಲ್ಲಿ ವಿಶ್ವದ ಅಪಾಯಕಾರಿ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ರೋಹಿತ್ ಕೂಡ ಒಬ್ಬರು. ಸದ್ಯ ಅಲ್ಲದಿದ್ದರೂ, ರೋಹಿತ್ ಆರಂಭಿಕರಾಗಿದ್ದುಕೊಂಡೇ ಸ್ಫೋಟಕ ಬ್ಯಾಟಿಂಗ್ ನಡೆಸಿದಿದೆ. ಆದರೆ ಟೆಸ್ಟ್ನಲ್ಲಿ ರೋಹಿತ್ ಪಂದ್ಯಗಳನ್ನಾಡಿದ್ದು ಕಡಿಮೆ. ಅದರಲ್ಲೂ ಆರಂಭಿಕರಾಗಿ ಆಡಿದ್ದು ಇನ್ನೂ ಕಡಿಮೆ. ಆದರೆ ಆರಂಭಿಕರಾಗಿ ಆಡಿದ ಮೂರೇ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ 3 ಶತಕ
2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಆಡಿದ್ದ ಶರ್ಮಾ 132.25ರ ಸರಾಸರಿಯಂತೆ 529 ರನ್ ಬಾರಿಸಿದ್ದರು. ಇದರಲ್ಲಿ 3 ಶತಕಗಳಲ್ಲದೆ 212 ವೈಯಕ್ತಿಕ ಅತ್ಯಧಿಕ ರನ್ ಕೂಡ ಸೇರಿತ್ತು. ಆದರೆ ರೋಹಿತ್ ಟೆಸ್ಟ್ ಆಡಿ ಬಹಳಷ್ಟು ಅಂತರವಾಗಿರುವುದರಿಂದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಆರಂಭಿಕರಾಗಿ ಆಡಿಸಬೇಕೋ ಬೇಡವೋ ಎಂಬ ಗೊಂದಲ ಶುರುವಾಗಿದೆ.

ಓಪನರ್ ಆಗಿ ಬರ್ತಾರ ರೋಹಿತ್?
ರೋಹಿತ್ ಟೆಸ್ಟ್ನಲ್ಲಿ ಆರಂಭಿಕರಾಗಿ ಬ್ಯಾಟಿಂಗ್ ಆಡಿದ್ದು ಕಡಿಮೆ. 7 ಅಥವಾ 5ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ತೃತೀಯ ಟೆಸ್ಟ್ನಲ್ಲಿ ರೋಹಿತ್ ಯಾವ ಕ್ರಮಾಂಕದಲ್ಲಿ ಬರಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿದೆ. ರೋಹಿತ್ ಆರಂಭಿಕರಾಗಿ ಇಳಿದರೆ ಅವರಿಗೆ ಜೊತೆಯಾಗಿ ಯಾರು ಬರಲಿದ್ದಾರೆ ಅನ್ನೋದು ಕಾದು ನೋಡಬೇಕಾಗಿದೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm