ಬ್ರೇಕಿಂಗ್ ನ್ಯೂಸ್
12-03-26 11:46 am HK News Staffer ಕ್ರೀಡೆ
ಮುಂಬೈ, ಮಾ 12: ಟಿ20 ವಿಶ್ವಕಪ್ ಗೆಲುವಿನ ಬಳಿಕ ಭಾರತೀಯ ತಂಡ ಸಂಭ್ರಮದಲ್ಲಿದ್ದಾಗ, ತಂಡದ ಆಲ್ರೌಂಡರ್ ಶಿವಂ ದುಬೆ ತಮ್ಮ ಸರಳತೆಯಿಂದ ಗಮನ ಸೆಳೆದಿದ್ದಾರೆ. ಅಹಮದಾಬಾದ್ನಿಂದ ಮುಂಬೈಗೆ ಮರಳಲು ವಿಮಾನದ ಟಿಕೆಟ್ ಸಿಗದ ಕಾರಣ, ಅವರು ಸಾಮಾನ್ಯ ಪ್ರಯಾಣಿಕನಂತೆ ರೈಲಿನಲ್ಲಿ ಪ್ರಯಾಣಿಸಿದ ಘಟನೆ ಇದೀಗ ವೈರಲ್ ಆಗಿದೆ.
ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಭರ್ಜರಿ ಜಯ ಸಾಧಿಸಿ ಟಿ20 ವಿಶ್ವಕಪ್ ಕಪ್ ಗೆದ್ದಿತ್ತು. ಪಂದ್ಯ ಮುಗಿದ ಬಳಿಕ ಆಟಗಾರರು ಟ್ರೋಫಿಯೊಂದಿಗೆ ಹೋಟೆಲ್ನಲ್ಲಿ ಸಂಭ್ರಮಾಚರಣೆ ನಡೆಸಿದ್ದರು.
ಆದರೆ ಮಧ್ಯರಾತ್ರಿ ಬಳಿಕ ಶಿವಂ ದುಬೆ ಮಾತ್ರ ಮನೆಗೆ ಬೇಗ ತಲುಪಬೇಕೆಂಬ ಆಸೆಯಿಂದ ಪ್ರಯಾಣದ ಯೋಜನೆ ಮಾಡಿದರು. ವಿಮಾನ ಟಿಕೆಟ್ ಹುಡುಕಿದಾಗ ಎಲ್ಲಾ ಫ್ಲೈಟ್ಗಳು ಫುಲ್ ಬುಕ್ ಆಗಿದ್ದವು. ಹೀಗಾಗಿ ಕಾಯುವ ಬದಲು ಮುಂಜಾನೆ ರೈಲಿನಲ್ಲಿ ಪ್ರಯಾಣಿಸುವುದೇ ಉತ್ತಮ ಎಂದು ಅವರು ನಿರ್ಧರಿಸಿದರು.
ಅದರಂತೆ ಅಹಮದಾಬಾದ್ನಿಂದ ಮುಂಬೈಗೆ ರೈಲು ಹತ್ತಿದರು. ಅಭಿಮಾನಿಗಳಿಗೆ ಗುರುತು ಸಿಗದಂತೆ ದುಬೆ ಕ್ಯಾಪ್, ಮಾಸ್ಕ್ ಹಾಗೂ ಫುಲ್ ಸ್ಲೀವ್ ಟೀ-ಶರ್ಟ್ ಧರಿಸಿ ಸಾಮಾನ್ಯ ಪ್ರಯಾಣಿಕನಂತೆ 3ನೇ ಎಸಿ ಕೋಚ್ನಲ್ಲಿ ಮೇಲಿನ ಬರ್ತ್ಗೆ ಹತ್ತಿ ಕುಳಿತಿದ್ದರು.
ಈ ವೇಳೆ ಟಿಕೆಟ್ ಪರಿಶೀಲನೆಗೆ ಬಂದ ಟಿಸಿ, ಪ್ರಯಾಣಿಕರ ಪಟ್ಟಿಯಲ್ಲಿ ಶಿವಂ ದುಬೆ ಎಂಬ ಹೆಸರನ್ನು ನೋಡಿ “ಇವರು ಆ ಕ್ರಿಕೆಟರ್ ಶಿವಂ ದುಬೆನಾ?” ಎಂದು ಪ್ರಶ್ನಿಸಿದ್ದರಂತೆ. ಆಗ ಕೆಳಗಿನ ಸೀಟಿನಲ್ಲಿ ಕೂತಿದ್ದ ಅವರ ಪತ್ನಿ ಅಂಜುಮ್ ಖಾನ್ “ಅಯ್ಯೋ ಇಲ್ಲ ಇಲ್ಲ, ಅವರು ಇಲ್ಲಿ ಯಾಕೆ ಬರುತ್ತಾರೆ?” ಎಂದು ಹೇಳಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರಂತೆ. ಇದನ್ನು ನಂಬಿದ ಟಿಸಿ ಮುಂದೆ ಹೋಗಿದ್ದಾರೆ.
ಕೊನೆಗೆ ಮುಂಬೈನ ಬೋರಿವಲಿ ನಿಲ್ದಾಣದಲ್ಲಿ ಇಳಿದ ಶಿವಂ ದುಬೆ ಅವರನ್ನು ಸ್ಥಳೀಯ ಪೊಲೀಸರು ಭದ್ರತೆಯೊಂದಿಗೆ ಮನೆ ತಲುಪಿಸಿದ್ದಾರೆ. ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದುಬೆ ಕೇವಲ 8 ಎಸೆತಗಳಲ್ಲಿ 26 ರನ್ ಸಿಡಿಸಿ ಭಾರತ ದೊಡ್ಡ ಮೊತ್ತ ಪೇರಿಸಲು ನೆರವಾಗಿದ್ದರು. ಟೂರ್ನಿಯಲ್ಲಿ ಒಟ್ಟು 235 ರನ್ ಹಾಗೂ 5 ವಿಕೆಟ್ ಪಡೆದು ಅವರು ಮಿಂಚಿದ್ದರು.
ವಿಶ್ವಕಪ್ ಗೆದ್ದ ಬಳಿಕವೂ ಸಾಮಾನ್ಯ ವ್ಯಕ್ತಿಯಂತೆ ರೈಲಿನಲ್ಲಿ ಪ್ರಯಾಣಿಸಿದ ಶಿವಂ ದುಬೆ ಅವರ ಸರಳತೆಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm