ಬ್ರೇಕಿಂಗ್ ನ್ಯೂಸ್
04-01-21 03:07 pm Source: MYKHEL ಕ್ರೀಡೆ
ಸಿಡ್ನಿ: ಸಿಡ್ನಿ ಟೆಸ್ಟ್ಗೆ ದಿನಗಣನೆ ಆರಂಭವಾಗಿದ್ದು ಸೋಮವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ಮೆಲ್ಬರ್ನ್ನಿಂದ ಸಿಡ್ನಿಗೆ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ಕೊರೊನಾ ಪರೀಕ್ಷೆ ನಡೆದಿದ್ದು ಎಲ್ಲರ ವರದಿಯೂ ನೆಗೆಟಿವ್ ಬಂದಿರುವುದು ನಿರಾಳತೆ ಮೂಡಿಸಿದೆ. ಈ ಮಧ್ಯೆ ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಂಡದಿಂದ ಹೊರಬಿದ್ದಿದ್ದಾರೆ.
ಜನವರಿ 7ರಂದು ಮೂರನೇ ಟೆಸ್ಟ್ ಪಂದ್ಯ ನಡೆಯಲಿದ್ದು ಅದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ತಮ್ಮ ಮನೆಯಲ್ಲಿ ಆಯತಪ್ಪಿ ಬಿದ್ದಿದ್ದು ಗಾಯಗೊಂಡಿದ್ದಾರೆ. ಹೀಗಾಗಿ ಪ್ಯಾಟಿನ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
ಜೇಮ್ಸ್ ಪ್ಯಾಟಿನ್ಸನ್ ಮೊದಲೆರಡು ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ಅವರಂತಾ ವೇಗದ ಬೌಲರ್ಗಳು ತಂಡದಲ್ಲಿರುವ ಕಾರಣ ಪ್ಯಾಟಿನ್ಸನ್ ಬೆಂಚ್ ಕಾಯಬೇಕಾಗಿತ್ತು. ಮತ್ತೊಂದೆಡೆ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ವೀಕ್ಷಕರ ವಿಚಾರದಲ್ಲೂ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೇಕಡಾ 50 ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ನಿರ್ಧಾರವನ್ನು ಬದಲಾಯಿಸಲಾಗಿದ್ದು ಶೇಕಡಾ 25 ರಷ್ಟು ಅಭಿಮಾನಿಗಳು ಮಾತ್ರವೇ ಆರಂಭದಲ್ಲಿ ಸಿಡ್ನಿ ಅಂಗಳಕ್ಕೆ ಅವಕಾಶ ನೀಡಲಾಗುತ್ತದೆ. ಸಿಡ್ನಿ ಕ್ರಿಕೆಟ್ ಮೈದಾನ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದ್ದು 9500ರಷ್ಟು ಪ್ರೇಕ್ಷಕರು ಮಾತ್ರವೇ ಆರಂಭದಲ್ಲಿ ವೀಕ್ಷಣೆಗೆ ಅವಕಾಶವಿದೆ.
ನ್ಯೂಸೌತ್ ವೇಲ್ಸ್ ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದ್ದು ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಂಡಿದೆ. ಅದರ ಪರಿಣಾಮವಾಗಿ ವೀಕ್ಷಕರ ಸಂಖ್ಯೆಯಲ್ಲೂ ಖಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm