ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm