ಬ್ರೇಕಿಂಗ್ ನ್ಯೂಸ್
06-01-21 03:00 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂದಿನ ಐಪಿಎಲ್ ಆಯೋಜನೆಗೆ ಸಿದ್ಧತೆ ಆರಂಭಿಸಿದೆ. ಮುಂಬೈ ಮಿರರ್ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಿದ್ದು ಐಪಿಎಲ್ ಆಡಳಿತ ಮಂಡಳಿ ಜನವರಿ 4ರಂದು ಮಂಗಳವಾರ ಸಭೆ ಸೇರಿದ್ದು 2021ರ ಐಪಿಎಲ್ಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದೆ ಎನ್ನಲಾಗಿದೆ.
ಈ ವರದಿಯ ಪ್ರಕಾರ ಹರಾಜು ಪ್ರಕ್ರಿಯೆಗೂ ಮುನ್ನ ಬಿಸಿಸಿಐ ವಹಿವಾಟು ನಡೆಸಲು ಬಾಗಿಲು ತೆರೆದಿದ್ದು ಜನವರಿ 21ರ ಒಳಗೆ ಆಟಗಾರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಫೆಬ್ರವರಿ 11 ರಂದು ಮಿನಿ ಹರಾಜು ನಡೆಸುವ ತಾತ್ಕಾಲಿಕ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ಇದೇ ವರದಿ ಹೇಳುತ್ತಿದೆ.
ಪೂರ್ವ ನಿಗದಿಯ ಪ್ರಕಾರ ಈ ವರ್ಷದಲ್ಲಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ನ ಕಾರಣದಿಂದಾಗಿ ಕಳೆದ ಆವೃತ್ತಿ ಆರು ತಿಂಗಳು ತಡವಾಗಿ ಆರಂಭವಾಗಿತ್ತು. ಹೀಗಾಗಿ ಪೂರ್ಣ ಪ್ರಮಾಣದ ಹರಾಜು ಪ್ರಕ್ರಿಯೆಯನ್ನು ಕೈ ಬಿಟ್ಟು ಮಿನಿ ಹರಾಜು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ದೇಶೀಯ ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಈ ಬಾರಿ ಆಯೋಜನೆ ಮಾಡಲಾಗುತ್ತಿದೆ. ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ರಣಜಿ ಟ್ರೋಫಿಗೂ ಮುನ್ನ ಈ ಬಾರಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಆಯೋಜನೆ ಮಾಡಲಾಗಿದೆ. ಹೀಗಾಗಿ ಹರಾಜು ಪ್ರಕ್ರಿಯೆಯಲ್ಲಿ ಈ ದೇಶೀಯ ಕ್ರಿಕೆಟ್ ಟೂರ್ನಿ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ.
ಇನ್ನು ಮುಂದಿನ ಆವೃತ್ತಿಯ ಆಯೋಜನೆಗೆ ಭಾರತವೇ ಮೊದಲನೇ ಆಯ್ಕೆಯಾಗಿದೆ. ಆದರೆ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುಂದಿನ ಸವಾಲನ್ನು ಎದುರಿಸಲು ಸಜ್ಜಾಗಿದೆ. ಹಾಗಾಗಿ ಯುಎಇಯನ್ನು 14ನೇ ಆವೃತ್ತಿಯ ಐಪಿಎಲ್ ಆಯೋಜನೆಗೂ ಮೀಸಲು ಇಡಲಾಗಿದೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm