ಬ್ರೇಕಿಂಗ್ ನ್ಯೂಸ್
07-01-21 05:03 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿ ಇನ್ನೇನು ಮೂರ್ನಾಲ್ಕು ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಐಪಿಎಲ್ ತಂಡಗಳ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸೋಮವಾರ ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆದಿದ್ದು ಫೆಬ್ರವರಿ 11ರಂದು ಮಿನಿ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.
ಸೋಮವಾರ ವರ್ಚುವಲ್ ವೇದಿಕೆಯಲ್ಲಿ ನಡೆದ ಮೀಟಿಂಗ್ನಲ್ಲಿ ಖಚಿತ ದಿನಾಂಕ ಹಾಗೂ ಐಪಿಎಲ್ ಆಯೋಜನೆಯ ಸ್ಥಳದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಆದರೆ ಈ ಬಾರಿಯ ಐಪಿಎಲ್ನಲ್ಲಿ ಈ ಹಿಂದಿನ ಆವೃತ್ತಿಯಂತೆ 8 ತಂಡಗಳು ಮಾತ್ರವೇ ಪಾಲ್ಗೊಳ್ಳಲಿದೆ ಎಂಬ ಖಚಿತ ನಿರ್ಧಾರವನ್ನು ಈ ಹಿಂದೆಯೇ ತೆಗೆದುಕೊಳ್ಳಲಾಗಿತ್ತು.
ಫೆಬ್ರವರಿ ತಿಂಗಳ ಮೊದಲ ವಾರದಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಹಾಗೂ ಎರಡನೇ ಟೆಸ್ಟ್ನ ವಿರಾಮದ ಸಂದರ್ಭದಲ್ಲಿ ಮಿನಿ ಹರಾಜು ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾದರೆ ಈ ಹರಾಜು ಪ್ರಕ್ರಿಯೆಯ ನಿಯಮಗಳೇನು? ಯಾವ ಆಟಗಾರರು ವರ್ಗಾವಣೆಗೆ ಅರ್ಹರಾಗಿರುತ್ತಾರೆ?

ಆಟಗಾರರ ವರ್ಗಾವಣೆ ನಿಯಮ
ಐಪಿಎಲ್ನಲ್ಲಿನ ಹೊಸ ನಿಯಮದ ಪ್ರಕಾರ ಫ್ರಾಂಚೈಸಿಗಳು ಆಂತರಿಕವಾಗಿ ಕ್ಯಾಪ್ಡ್ ಅಥವಾ ಅನ್ಕ್ಯಾಪ್ಡ್ ಆಟಗಾರರನ್ನು ಬದಲಾಯಿಸಿಕೊಲ್ಳುವ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಕೇವಲ ಅನ್ಕ್ಯಾಪ್ಡ್ ಅಂದರೆ ಆಡದ ಆಟಗಾರರನ್ನು ಮಾತ್ರವೇ ವರ್ಗಾವಣೆ ಮಾಡುವ ಅವಕಾಶವಿತ್ತು.

ತಂಡದ ಪರ್ಸ್ನಲ್ಲಿ ಉಳಿದಿರುವ ಮೊತ್ತ
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈಗ ಕೇವಲ 0.15 ಕೋಟಿ ಮಾತ್ರವೇ ಬಾಕಿ ಉಳಿದುಕೊಂಡಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 16.5 ಕೋಟಿ ಮೊತ್ತವನ್ನು ಹೊಂದಿದ್ದು ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿರುವ ತಂಡವಾಗಿದೆ. ರಾಜಸ್ಥಾನ ರಾಯಲ್ಸ್(14.75 ಕೋಟಿ), ಸನ್ರೈಸರ್ಸ್ ಹೈದರಾಬಾದ್ (10.1ಕೋಟಿ) ಡೆಲ್ಲಿ ಕ್ಯಾಪಿಟಲ್ಸ್ (9 ಕೋಟಿ), ಕೊಲ್ಕತ್ತಾ ನೈಟ್ ರೈಡರ್ಸ್(8.5 ಕೋಟಿ) ರಾಯಲ್ ಚಾಲೆಂಜರ್ಸ್ ಬೆಂಗಳೂರು (6.4 ಕೋಟಿ) ಮುಂಬೈ ಇಂಡಿಯನ್ಸ್(1.95 ಕೋಟಿ)

ಐಪಿಎಲ್ 2021 ಶೆಡ್ಯೂಲ್
ಐಪಿಎಲ್ನ 14ನೇ ಆವೃತ್ತಿ ಮಾರ್ಚ್ ಅಂತ್ಯಕ್ಕೆ ಆರಂಭವಾಗಿ ಮೇ ಮಧ್ಯಭಾಗದಲ್ಲಿ ಅಂತ್ಯವಾಗುವ ನಿರೀಕ್ಷೆಯಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಬಾರಿಯ ಐಪಿಎಲ್ ಆವೃತ್ತಿಯನ್ನು ಭಾರತದಲ್ಲೇ ಆಯೋಜಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯ ಐಪಿಎಲ್ ಆವೃತ್ತಿ ಕೊರೊನಾ ವೈರಸ್ನ ಕಾರಣದಿಂದಾಗಿ ಯುಎಇನಲ್ಲಿ ಆಯೋಜನೆಯಾಗಿತ್ತು. ಕೊರೊನಾ ವೈರಸ್ನ ತೀವ್ರತೆ ಕಡಿಮೆಯಾಗದಿದ್ದಲ್ಲಿ ಈ ಬಾರಿಯೂ ಯುಎಇನಲ್ಲೆ ಐಪಿಎಲ್ ಆಯೋಜನೆಯಾಗುವ ಸಂಭವವಿದೆ.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm