ಬ್ರೇಕಿಂಗ್ ನ್ಯೂಸ್
08-01-21 03:32 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದರೆ. ಟೆಸ್ಟ್ ಕ್ರಿಕೆಟ್ನ 27ನೇ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಇನ್ನಿಂಗ್ಸ್ಗೆ ಆಸರೆಯಾದರು. ಈ ಮೂಲಕ ಆಸ್ಟ್ರೇಲಿಯಾ ಮುನ್ನೂರು ರನ್ಗಳ ಗಡಿಯನ್ನು ದಾಟಲು ಕಾರಣರಾದರು.
ಸ್ಟೀವ್ ಸ್ಮಿತ್ ಮೂರನೇ ಟೆಸ್ಟ್ನಲ್ಲಿ 131 ರನ್ಗಳ ಭರ್ಜರಿ ಪ್ರದರ್ಶನವನ್ನು ನೀಡಿದರು. ಈ ಮೂಲಕ ಮತ್ತಷ್ಟು ರನ್ ಆಸಿಸ್ ಪಡೆಯ ಖಾತೆಗೆ ಸೇರಿಸುವ ಉದ್ದೇಶವನ್ನಿಟ್ಟುಕೊಂಡಿದ್ದರು. ಆದರೆ ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಅದ್ಭುತವಾದ ಥ್ರೋ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಆಸಿಸ್ ಇನ್ನಿಂಗ್ಸ್ನ ಅಂತ್ಯಕ್ಕೆ ಕಾರಣರಾದರು.
ಸ್ಟೀವ್ ಸ್ಮಿತ್ 130 ರನ್ ಗಳಿಸಿದ್ದ ವೇಳೆ ಎರಡು ರನ್ ಗಳಿಸುವ ಪ್ರಯತ್ನವನ್ನು ನಡೆಸಿದ್ದರು. ಮೊದಲ ರನ್ಅನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ರನ್ಗೆ ಓಟಕ್ಕಿತ್ತರು. ಈ ವೇಳೆ ಚೆಂಡು ಫೀಲ್ಡರ್ ರವೀಂದ್ರ ಜಡೇಜಾ ಕೈಗೆ ತಲುಪಿತ್ತು. ಜಡೇಜಾ ಚೆಂಡನ್ನು ನೇರವಾಗಿ ಗುರಿಯಿಟ್ಟು ಸ್ಟ್ರೈಕರ್ ತುದಿಯ ವಿಕೆಟ್ಗೆ ಎಸೆದರು. ಅದು ವಿಕೆಟ್ ಹಾರಿಸುವ ಮೂಲಕ ಸ್ಮಿತ್ ಅವರ ಅದ್ಭುತ ಇನ್ನಿಂಗ್ಸ್ ಅಂತ್ಯಗೊಳಿಸಿತು. ಅಲ್ಲಿಗೆ ಸ್ಮಿತ್ 131 ರನ್ ಗಳಿಸಿದ್ದರು. ಜಡೇಜಾ ಅವರ ಈ ಫೀಲ್ಡಿಂಗ್ಗೆ ಅಭಿಮಾನಿಗಳು ಮನಸೋತಿದ್ದು ಟ್ವಿಟ್ಟರ್ನಲ್ಲಿ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ.
ರವೀಂದ್ರ ಜಡೇಜಾ ಸ್ಟೀವ್ ಸ್ಮಿತ್ ಅವರನ್ನು ರನೌಟ್ ಮಾಡುವ ಮುನ್ನ ಬೌಲಿಂಗ್ನಲ್ಲೂ ಭಾರತಕ್ಕೆ ಉತ್ತಮ ಯಶಸ್ಸನ್ನು ನೀಡಿದರು. ಟೀಮ್ ಇಂಡಿಯಾ ಪರವಾಗಿ ಜಡೇಜಾ ಆಸ್ಟ್ರೇಲಿಯಾದ 4 ವಿಕೆಟ್ ಕಿತ್ತಿದ್ದಾರೆ. ಮೊದಲ ದಿನದಾಟದಲ್ಲಿ ಬೌಲಿಂಗ್ ಮಾಡಲು ಜಡೇಜಾ ಹೆಚ್ಚಿನ ಅವಕಾಶವನ್ನು ಪಡೆದಿರಲಿಲ್ಲ. ಎರಡನೇ ದಿನದಲ್ಲಿ 91 ರನ್ ಗಳಿಸಿದ್ದ ಲಾಬುಶೇನ್ ಅವರನ್ನು 91 ರನ್ಗೆ ಔಟ್ ಮಾಡಿ ಮೊದಲ ಯಶಸ್ಸು ನೀಡಿದರು. ಅದಾದ ಬಳಿಕ ಜಡೇಜಾ ಮ್ಯಾಥ್ಯೂ ವೇಡ್ ವಿಕೆಟ್ ಪಡೆದು ಆಸ್ಟ್ರೇಲಿಯಾಗೆ ಮತ್ತೊಂದು ಆಘಾತವನ್ನು ನೀಡಿದ್ದರು. ಬಳಿಕ ಪ್ಯಾಟ್ ಕಮ್ಮಿನ್ಸ್ ಹಾಗೂ ನಥನ್ ಲಿಯಾನ್ ಕೂಡ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದ್ದರು.
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm