ಬ್ರೇಕಿಂಗ್ ನ್ಯೂಸ್
11-01-21 02:07 pm Source: MYKHEL ಕ್ರೀಡೆ
ಸಿಡ್ನಿ : ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಸೋಲಿನ ಸಮೀಪದಲ್ಲಿದ್ದ ಭಾರತವನ್ನು ದ್ವಿತೀಯ ಇನ್ನಿಂಗ್ಸ್ನಲ್ಲಿ ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ರಿಷಭ್ ಪಂತ್ ಅರ್ಧ ಶತಕ ಮತ್ತು ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್ ಅವರ ಅಜೇಯ ಆಟ ಸೋಲಿನಿಂದ ಪಾರು ಮಾಡಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಸರಣಿ 1-1ರಿಂದ ಸಮಬಲಗೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ ವಿಲ್ ಪುಕೊವ್ಸ್ಕಿ 62, ಮಾರ್ನಸ್ ಲಾಬುಶೇನ್ 91, ಸ್ಟೀವನ್ ಸ್ಮಿತ್ 131, ಮ್ಯಾಥ್ಯೂ ವೇಡ್ 13, ಮಿಚೆಲ್ ಸ್ಟಾರ್ಕ್ 24 ರನ್ ಬಾರಿಸಿದ್ದರು. ಆಸೀಸ್ 105.4 ಓವರ್ಗೆ 338 ರನ್ ಪೇರಿಸಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಹಿನ್ನಡೆ
ಮೊದಲ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 26, ಶುಬ್ಮನ್ ಗಿಲ್ 50, ಚೇತೇಶ್ವರ್ ಪೂಜಾರ 50, ನಾಯಕ ಅಜಿಂಕ್ಯ ರಹಾನೆ 22, ರಿಷಭ್ ಪಂತ್ 36, ರವೀಂದ್ರ ಜಡೇಜಾ ಅಜೇಯ 28, ರವಿಚಂದ್ರನ್ ಅಶ್ವಿನ್ 10, ಮೊಹಮ್ಮದ್ ಸಿರಾಜ್ 6 ರನ್ ಬಾರಿಸಿದರು. ಭಾರತ 100.4 ಓವರ್ಗೆ ಎಲ್ಲಾ ವಿಕೆಟ್ ಕಳೆದು 244 ರನ್ ಪೇರಿಸಿ 94 ರನ್ ಹಿನ್ನಡೆ ಅನುಭವಿಸಿತು.

312 ರನ್ಗೆ ಆಸ್ಟ್ರೇಲಿಯಾ ಡಿಕ್ಲೇರ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ, ಡೇವಿಡ್ ವಾರ್ನರ್ 13, ವಿಲ್ ಪುಕೊವ್ಸ್ಕಿ 10, ಮಾರ್ನಸ್ ಲಾಬುಶೇನ್ 73, ಸ್ಟೀವನ್ ಸ್ಮಿತ್ 81, ಕ್ಯಾಮರಾನ್ ಗ್ರೀನ್ 84, ಟಿಮ್ ಪೇನ್ ಅಜೇಯ 39 ರನ್ನೊಂದಿಗೆ 87 ಓವರ್ಗೆ 6 ವಿಕೆಟ್ ಕಳೆದು 312 ರನ್ ಗಳಿಸಿ ಡಿಕ್ಲೇರ್ ಘೋಷಿಸಿದೆ.

ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್
ದ್ವಿತೀಯ ಇನ್ನಿಂಗ್ಸ್ನಲ್ಲಿ ಭಾರತದಿಂದ ರೋಹಿತ್ ಶರ್ಮಾ 52, ಶುಬ್ಮನ್ ಗಿಲ್ 31, ಚೇತೇಶ್ವರ್ ಪೂಜಾರ 77, ರಿಷಭ್ ಪಂತ್ 97, ಹನುಮ ವಿಹಾರಿ ಅಜೇಯ 23, ರವಿಚಂದ್ರನ್ ಅಶ್ವಿನ್ ಅಜೇಯ ಅಜೇಯ 39 ರನ್ ಸೇರಿಸಿದರು. 131 ಓವರ್ಗೆ ಭಾರತ 5 ವಿಕೆಟ್ ಕಳೆದು 334 ರನ್ ಬಾರಿಸಿತ್ತು. ಆದರೆ ದಿನದಾಟ ಮುಗಿದಿದ್ದರಿಂದ ಫಲಿತಾಂಶ ಡ್ರಾ ಎಂದು ಘೋಷಿಸಲ್ಪಟ್ಟಿತು.

ಪ್ಯಾಟ್ ಕಮಿನ್ಸ್ ಬೆಸ್ಟ್ ಬೌಲಿಂಗ್
ಆಸ್ಟ್ರೇಲಿಯಾ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬೂಮ್ರಾ 2+1, ಮೊಹಮ್ಮದ್ ಸಿರಾಜ್ 1+1, ಆರ್ ಅಶ್ವಿನ್ 2, ನವದೀಪ್ ಸೈನಿ 2+2, ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಭಾರತದ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 1, ಜೋಶ್ ಹ್ಯಾಝಲ್ವುಡ್ 2+2, ಪ್ಯಾಟ್ ಕಮಿನ್ಸ್ 4+1, ನೇಥನ್ ಲಿಯಾನ್ 1 ವಿಕೆಟ್ನೊಂದಿಗೆ ಗಮನ ಸೆಳೆದರು. ಸ್ಟೀವ್ ಸ್ಮಿತ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm