ಬ್ರೇಕಿಂಗ್ ನ್ಯೂಸ್
12-08-20 04:53 pm Headline Karnataka News Network ಕ್ರೀಡೆ
ಆಗಸ್ಟ್ 12: ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಅನಾರೋಗ್ಯರಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ನ ಖ್ಯಾತ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಕಂಡುಬಂದಿದೆ. ಸದ್ಯ 61 ವರ್ಷದ ಸಂಜಯ್ ದತ್ ಅವರಿಗೆ ಕ್ಯಾನ್ಸರ್ 3ನೇ ಹಂತದಲ್ಲಿದ್ದು ಹೆಚ್ಚಿನ ಚಿಕಿತ್ಸೆಗೆ ಯುಎಸ್ಗೆ ತೆರಳಿದ್ದಾರೆ. ಕಳೆದ ಶನಿವಾರದಂದು ಸಂಜಯ್ ದತ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರಿಗೆ ಲಂಗ್ ಕ್ಯಾನ್ಸರ್ ಇರುವುದು ಖಚಿತಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ 'ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ' ಎಂದಿದ್ದಾರೆ.
ಸಂಜಯ್ ದತ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಕೂಡ ಟ್ವೀಟ್ ಮಾಡಿದ್ದು, "ನೀವು ಫೈಟರ್, ಅಷ್ಟು ಬೇಗ ಸೋಲನ್ನು ಒಪ್ಪಿಕೊಳ್ಳುವವರಲ್ಲ. ಈ ನೋವು ನನಗೆ ಚೆನ್ನಾಗಿಯೆ ತಿಳಿದಿದೆ. ಗಟ್ಟಿಜೀವ ಸಂಜಯ್ ದತ್ ಕ್ಯಾನ್ಸರ್ ಜೊತೆ ಗುದ್ದಾಡಿ ಗೆದ್ದು ಬರಲಿ" ಎಂದು ಯುವಿ ಸ್ಫೂರ್ತಿದಾಯಕ ಸಂದೇಶ ಹೇಳಿದ್ದಾರೆ.
You are, have and always will be a fighter @duttsanjay. I know the pain it causes but I also know you are strong and will see this tough phase through. My prayers and best wishes for your speedy recovery.
— Yuvraj Singh (@YUVSTRONG12) August 11, 2020
16-10-25 04:44 pm
HK News Desk
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm