ಬ್ರೇಕಿಂಗ್ ನ್ಯೂಸ್
12-08-20 05:30 pm Headline Karnataka News Network ಕ್ರೀಡೆ
ಮುಂಬೈ, ಆಗಸ್ಟ್ 12: 27 ವರ್ಷದ ಯುವ ಕ್ರಿಕೆಟ್ ಆಟಗಾರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈನ 27 ವರ್ಷದ ಕ್ರಿಕೆಟಿಗ ಕರಣ್ ತಿವಾರಿ ಸೋಮವಾರ ರಾತ್ರಿ ತಮ್ಮ ಮಲಾಡ್ ಪ್ರದೇಶದಕ್ಕಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಣ್ ತಿವಾರಿ ಮುಂಬೈ ವೃತ್ತಿಪರ ಕ್ರಿಕೆಟ್ ತಂಡದ ಭಾಗವಾಗಿರಲಿಲ್ಲ. ಆದರೆ ಅವರು ಅವರಿಗೆ ನೆಟ್ ಬೌಲರ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ತಿವಾರಿ ವೃತ್ತಿಜೀವನದಲ್ಲಿ ಯಶಸ್ಸು ಸಿಗದೆ ಖಿನ್ನತೆಯಿಂದ ಬಳಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
ಕರಣ್ ತಿವಾರಿ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ್ದು, ತನ್ನ ತಾಯಿ ಮತ್ತು ಸಹೋದರನೊಂದಿಗೆ ಮುಂಬೈನ ಮಲಾಡ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜೊತೆಗೆ ಕ್ರಿಕೆಟರ್ ಆಗಬೇಕು ಎಂಬ ಕನಸು ಕಂಡಿದ್ದ ತಿವಾರಿ ಮುಂಬೈನ ಹಲವಾರು ಕ್ಲಬ್ಗಳಿಗೆ ಆಡಿದ್ದರು. ಜೊತೆಗೆ ದೇಶೀಯ ಕ್ರಿಕೆಟ್ ಆಟಗಾರಿಗೆ ನೆಟ್ ಬಾಲ್ ಬೌಲರ್ ಆಗಿದ್ದರು. ಇದರಿಂದ ಮನನೊಂದಿದ್ದ ತಿವಾರಿ ತಮ್ಮ ಪ್ರತಿಭೆಯನ್ನು ತೋರಿಸಲು ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು.
ಕೊರೊನಾ ಲಾಕ್ಡೌನ್ ನಂತರ ತಿವಾರಿ ಮನೆಯಿಂದ ಹೊರಗೆ ಬಾರದೇ ಖಿನ್ನತೆಗೆ ಒಳಗಾಗಿದ್ದರು. ಜೊತೆಗೆ ತನ್ನ ರಾಜಸ್ಥಾನದಲ್ಲಿರುವ ಗೆಳೆಯರಿಗೆ ಕರೆ ಮಾಡಿ ನಾನು ಏನನ್ನೂ ಸಾಧಿಸಲು ಆಗಲಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಂತರ ಸ್ನೇಹಿತರು ತಿವಾರಿ ಸಹೋದರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಸೋಮವಾರ ರಾತ್ರಿ 10.30ರ ಸುಮಾರಿಗೆ ಕರಣ್ ತಿವಾರಿ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಬಾಗಿಲು ಒಡೆದು ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕುರಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm