ಬ್ರೇಕಿಂಗ್ ನ್ಯೂಸ್
19-01-21 01:24 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಉತ್ತಮ ಪ್ರದರ್ಶನ ತೋರಿ ಅಗ್ರ ನಾಲ್ಕರಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಕೊಂಡಿರುವ ಹೈದರಾಬಾದ್ ಎಫ್ ಸಿ ಮಂಗಳವಾರ ಫಟೋರ್ಡಾ ಅಂಗಣದಲ್ಲಿ ನಡೆಯಲಿರುವ ಒಡಿಶಾ ವಿರುದ್ಧದ ಪಂದ್ಯದಲ್ಲಿ ಜಯ ಗಳಿಸಿ ಗೋವಾದೊಂದಿಗೆ ಮೂರನೇ ಸ್ಥಾನವನ್ನು ಹಂಚಿಕೊಳ್ಳುವ ಗುರಿಹೊಂದಿದೆ. ಹಿಂದಿನ ಪಂದ್ಯದಲ್ಲಿ ಆಗ್ರ ಸ್ಥಾನದಲ್ಲಿರುವ ಮುಂಬೈ ಸಿಟಿ ಎಫ್ ಸಿ ವಿರುದ್ಧ ಹೈದರಾಬಾದ್ ಕೇವಲ ಒಂದು ಅಂಕ ಗಳಿಸಿರಬಹುದು, ಆದರೆ ಒಂದು ಅಂಕಕ್ಕಿಂತ ಆ ರೀತಿಯ ಫಲಿತಾಂಶ ಮುಖ್ಯವಾದುದಾಗಿತ್ತು.
ಅದು ಈ ಋತುವಿನ ಅತ್ಯಂತ ಕಠಿಣ ಪಂದ್ಯವಾಗಿತ್ತು. ತಂಡ ಉತ್ತಮ ರೀತಿಯಲ್ಲಿ ತನ್ನ ನೈಜ ಹೋರಾಟವನ್ನು ಪ್ರದರ್ಶಿಸಿತ್ತು. ಮುಂಬೈ ತಂಡದ ಜಯಕ್ಕೆ ಅಡ್ಡಿಯನ್ನುಂಟುಮಾಡಿರುವುದು ಪಂದ್ಯ ಗೆದ್ದಷ್ಟೇ ಸಾಧನೆ ಮಾಡಿದಂತಾಗಿತ್ತು, ಪ್ರತಿಯೊಂದು ಪಂದ್ಯದಲದಲೂ ಗೋಲು ಗಳಿಸಿರುವ ಮುಂಬೈ ತಂಡಕ್ಕೆ ಗೋಲು ಗಳಿಸದಂತೆ ತಡೆಯೊಡ್ಡಿರುವುದು ಅದ್ಭುತ ಸಾಧನೆ. ತಮಗೆ ಸಿಕ್ಕಿರುವ ಆವಕಾಶವನ್ನು ಗೋಲಾಗಿ ಪರಿವರ್ತಿಸಿರುತ್ತಿದ್ದರೆ ನಿಜಾಮರು ಮೂರು ಅಂಕಗಳನ್ನು ಗಳಿಸುತ್ತಿದ್ದರು. ಮುಂಬೈ ವಿರುದ್ಧ ಉತ್ತಮ ಪ್ರದರ್ಶನ ತೋರಿದ ಹೈದಾರಬಾದ್ ಮಂಗಳವಾರ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಒಡಿಶಾ ವಿರುದ್ಧ ಜಯ ಸಾಧಿಸಿದರೆ ಮೂರನೇ ಸ್ಥಾನದಲ್ಲಿರುವ ಗೋವಾದೊಂದಿಗೆ ಸಮಬಲ ಸಾಧಿಸಲಿದೆ.

ಆತ್ಮವಿಶ್ವಾಸ ಉನ್ನತ ಹಂತದಲ್ಲಿದೆ
"ಖಂಡಿತವಾಗಿಯೂ ನಮ್ಮ ಆತ್ಮವಿಶ್ವಾಸ ಉನ್ನತ ಹಂತದಲ್ಲಿದೆ. ಮುಂಬೈಯಂಥ ತಂಡದ ವಿರುದ್ಧ ನಾವು ತೋರಿದ ಪ್ರದರ್ಶನವನ್ನೇ ನಾಳೆಯ ಪಂದ್ಯದಲ್ಲಿ ತೋರಿದರೆ ಜಯ ನಮಗೆ ಕಟ್ಟಿಟ್ಟ ಬುತ್ತಿ" ಎಂದು ಕೋಚ್ ಮಾರ್ಕ್ವೆಜ್ ಹೇಳಿದ್ದಾರೆ, "ದೈಹಿಕ, ರಣತಂತ್ರ ಮತ್ತು ತಾಂತ್ರಿಕವಾಗಿ ತಂಡ ಉತ್ತಮ ಪ್ರದರ್ಶನ ತೋರಿದೆ," ಎಂದರು. ಋತುವಿನ ಆರಂಭದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದವು. ಗಾಯಗೋಡ ಒಡಿಶಾ ವಿರುದ್ಧ ಹೈದರಾಬಾದ್ ಪರ ಅರಿದಾನೆ ಸ್ಯಾಂಟನಾ ಪೆನಾಲ್ಟಿ ಮೂಲಕ ಗೋಲು ಗಳಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಹಿಂದಿನ ಫಲಿತಾಂಶವನ್ನು ಗಮನಿಸಿದರೆ ಒಡಿಶಾ ವಿರುದ್ಧ ಹೈದರಾಬಾದ್ ಗೆಲ್ಲುವ ಫೇವರಿಟ್ ಎಂದು ಕೋಚ್ ಮಾರ್ಕ್ವೇಜ ಹೇಳಿದ್ದಾರೆ, ಆದರೆ ಈಗ ಒಡಿಶಾ ಉತ್ತಮ ರಣತಂತ್ರದೊಂದಿಗೆ ಅಂಗಣಕ್ಕಿಳಿಯುತ್ತಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಗೆದ್ದಿರುವುದು ಕೇವಲ 1-0
ಅಂತರದಲ್ಲಿ "ಆ ಪಂದ್ಯದಲ್ಲಿ ನಾವು ಉತ್ತಮವಾಗಿ ಆಡಿದ್ದೇವೆ, ಆದರೆ ಗೆದ್ದಿರುವುದು ಕೇವಲ 1-0 ಅಂತರದಲ್ಲಿ," ಎಂದು ಹೇಳಿರುವ ಮಾರ್ಕ್ವೇಜ್, "ಇತ್ತೀಚಿನ ಪಂದ್ಯಗಳಲ್ಲಿ ಒಡಿಶಾ ಉತ್ತಮವಾಗಿ ಆಡುತ್ತಿದೆ, ಟೇಬಲ್ ನಲ್ಲಿ ಆ ತಂಡ ಕೊನೆಯ ಸ್ಥಾನದಲ್ಲಿದೆ ಎಂಬುದು ನಿಜ, ಆದರೆ, ಈ ಲೀಗ್ ನ್ನು ಗಮನಿಸುತ್ತಿರುವವರಿಗೆ ಯಾವುದೇ ತಂಡ ಇನ್ನೊಂದು ತಂಡದ ವಿರುದ್ಧ ಗೆಲ್ಲಬಹುದು ಎಂಬುದನ್ನು ಬಲ್ಲರು," ಎಂದಿದ್ದಾರೆ. ಈ ಪಂದ್ಯಕ್ಕೆ ಮುನ್ನ ಚೆನ್ನೈಯಿನ್ ವಿರುದ್ಧ ನಡೆದ ಪಂದ್ಯದಲ್ಲಿ ಸೋಲುವ ಮೂಲಕ ಒಡಿಶಾ ಮನೋಬಲವನ್ನು ಕುಂದಿಸುವ ಏಳನೇ ಸೋಲನ್ನು ದಾಖಲಿಸಿತ್ತು, ಇದು ತಂಡವೊಂದು ಕಂಡಿರುವ ಅತಿ ಹೆಚ್ಚು ಸೋಲಾಗಿದೆ. ಈಗ ತಂಡ ಗಳಿಸಿರುವುದು ಕೇವಲ ಆರು ಅಂಕಗಳು. ಮಂಗಳವಾರ ಸೋತರೆ ತಂಡದ ಪ್ಲೇ ಆಫ್ ಆಸೆ ನುಚ್ಚು ನೂರಾಗಲಿದೆ.

ಉತ್ತಮ ಪ್ರದರ್ಶನ ತೋರಲಿದೆ
ಈ ಎಲ್ಲ ಹಿನ್ನಡೆಯ ನಡುವೆಯೂ ತಂಡದ ಕೋಚ್, ಸ್ಟುವರ್ಟ್ ಬಾಕ್ಸ್ಟರ್ ತಮ್ಮ ತಂಡ ಹೈದಾರಬಾದ್ ವಿರುದ್ಧ ಉತ್ತಮ ಪ್ರದರ್ಶನ ತೋರಲಿದೆ ಎಂದು ಆತ್ಮವಿಶ್ವಾದಲ್ಲಿ ನುಡಿದಿದ್ದಾರೆ. "ನಾವು ಮೊದಲ ಪಂದ್ಯವನ್ನಾಡಿರುವ ತಂಡದ ವಿರುದ್ಧ ಉತ್ತಮವಾಗಿಯೇ ಆಡಿದ್ದೆವು. ನಾವು ದೊಡ್ಡ ತಪ್ಪನ್ನು ಮಾಡಿದ ಕಾರಣ ಪೆನಾಲ್ಟಿ ಮೂಲಕ ಸೋಲು ಅನುಭವಿಸಬೇಕಾಯಿತು. ಈಗ ನಾವು ಸುಧಾರಣೆ ಕಂಡಿದ್ದೇವೆ, ಹೈದರಾಭಾದ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದ್ದೇವೆ," ಎಂದರು.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm