ಬ್ರೇಕಿಂಗ್ ನ್ಯೂಸ್
20-01-21 02:46 pm Source: MYKHEL Madhukara Shetty ಕ್ರೀಡೆ
ಕರ್ನಾಟಕ ತಂಡದ ಅನುಭವಿ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಮುಂದಿನ ತಿಂಗಳಿನ ಆರಂಭದಲ್ಲಿ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ನೆಟ್ ಬೌಲರ್ ಆಗಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಕರ್ನಾಟಕ ತಂಡವನ್ನು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅವರು ಪ್ರತಿನಿಧಿಸುತ್ತಿದ್ದಾರೆ.
ದೇಶೀಯ ಕ್ರಿಕೆಟ್ನಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ ಅನುಭವ ಹೊಂದಿರುವ ಕೃಷ್ಣಪ್ಪ ಗೌತಮ್ ಭಾರತ ಎ ತಂಡವನ್ನು ಕೂಡ ಪ್ರತಿನಿಧಿಸಿದ ಅನುಭವವನ್ನು ಹೊಂದಿದ್ದಾರೆ. ಐಪಿಎಲ್ನಲ್ಲಿ ಕಳೆದ ಹಲವು ವರ್ಷಗಳಿಂದ ಅವಕಾಶ ಗಿಟ್ಟಿಸಿಕೊಂಡಿರುವ ಕೆ ಗೌತಮ್ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದಾರೆ.
ದೇಶೀಯ ಕ್ರಿಕೆಟ್ನಲ್ಲಿ ಸಾಕಷ್ಟು ಅದ್ಭುತ ಪ್ರದರ್ಶನಗಳನ್ನು ನೀಡಿರುವ ಕೃಷ್ಣಪ್ಪ ಗೌತಮ್ಗೆ ರಾಷ್ಟ್ರೀಯ ತಂಡದಲ್ಲಿ ಈವರೆಗೂ ಅವಕಾಶ ದೊರೆತಿಲ್ಲ. ಐಪಿಎಲ್, ದೇವಧರ್ ಟ್ರೋಫಿಯಂತಾ ಪ್ರಮುಖ ಟೂರ್ನಿಗಳಲ್ಲಿ ಮಿಂಚಿದ್ದರೂ ಭಾರತೀಯ ಕ್ರಿಕೆಟ್ನ ಆಯ್ಕೆ ಸಮಿತಿ ಕೆ ಗೌತಮ್ ಅವರತ್ತ ಚಿತ್ತವನ್ನು ಹರಿಸಿರಲಿಲ್ಲ. ಲೆಗ್ ಸ್ಪಿನ್ನರ್ ಆಗಿರುವ ಕೆ ಗೌತಮ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮೂಲಕವೂ ತಂಡಕ್ಕೆ ನೆರವಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಆಟಗಾರರಿಗೆ ನೆಟ್ನಲ್ಲಿ ಅಭ್ಯಾಸಕ್ಕಾಗಿ ಕೆ ಗೌತಮ್ಗೆ ಅವಕಾಶವನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೆಟ್ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಾಕಷ್ಟು ಆಟಗಾರರು ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿರುವುದು ಕೆ ಗೌತಮ್ಗೂ ರಾಷ್ಟ್ರೀಯ ತಂಡದಲ್ಲಿ ಅವಕಾಶ ದೊರೆಯಬಹುದು ಎಂಬ ನಿರೀಕ್ಷೆ ಮೂಡಲು ಕಾರಣವಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಗೆ ಒಟ್ಟು ಐವರನ್ನು ನೆಟ್ ಬೌಲರ್ಗಳನ್ನಾಗಿ ಹೆಸರಿಸಲಾಗಿದೆ. ಕರ್ನಾಟಕದ ಕೆ ಗೌತಮ್ ಜೊತೆಗೆ ಉತ್ತರ ಪ್ರದೇಶದ ಅಂಕಿತ್ ರಜಪೂತ್, ಮಧ್ಯಪ್ರದೇಶದ ಅವೇಶ್ ಖಾನ್, ಕೇರಳದ ಸಂದೀಪ್ ವಾರಿಯರ್, ಉತ್ತರ ಪ್ರದೇಶದ ಸೌರಭ್ ಕುಮಾರ್ ನೆಟ್ ಬೌಲರ್ ಆಗಿ ಮುಂಬರುವ ಸರಣಿಯಲ್ಲಿ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಭಾಗಿಯಾಗಲಿದ್ದಾರೆ
This News Article is a Copy of MYKHEL
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm