ಬ್ರೇಕಿಂಗ್ ನ್ಯೂಸ್
25-01-21 04:30 pm Source: MYKHEL Sadashiva ಕ್ರೀಡೆ
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ಗೆ ಕ್ರಿಕೆಟ್ ನಿರ್ದೇಶಕರಾಗಿ ಶ್ರೀಲಂಕಾದ ಬ್ಯಾಟಿಂಗ್ ದಂತಕತೆ ಕುಮಾರ ಸಂಗಕ್ಕಾರ ಆಯ್ಕೆಯಾಗಿದ್ದಾರೆ. 2021ರ ಐಪಿಎಲ್ ಸೀಸನ್ನಲ್ಲಿ ಸಂಗಕ್ಕಾರ ಆರ್ಆರ್ ತಂಡದ ಜೊತೆಗಿದ್ದು ಬಲ ತುಂಬಲಿದ್ದಾರೆ.
ಸದ್ಯ ಇಂಗ್ಲೆಂಡ್ನ ಮೇರಿಲೆಬೋನ್ ಕ್ರಿಕೆಟ್ ಕ್ಲಬ್ನ (ಎಂಸಿಸಿ) ಅಧ್ಯಕ್ಷರಾಗಿರುವ ಕುಮಾರ ಸಂಗಕ್ಕಾರ ಮುಂದೆ ನಾಗ್ಪುರದ ರಾಯಲ್ಸ್ ಅಕಾಡೆಮಿಯಲ್ಲಿದ್ದು ರಾಜಸ್ಥಾನ್ ರಾಯಲ್ಸ್ನ ಕೋಚಿಂಗ್ ರೂಪುರೇಷೆ, ಆ್ಯಕ್ಷನ್ ಪ್ಲ್ಯಾನ್, ತಂಡದ ತಂತ್ರಗಾರಿಕೆ, ಪ್ರತಿಭಾನ್ವೇಶಣೆ, ತಂಡದ ಅಭಿವೃದ್ಧಿ ಇತ್ಯಾದಿಗಳ ಜವಾಬ್ದಾರಿ ಹೊರಲಿದ್ದಾರೆ. 'ರಾಜಸ್ಥಾನ್ ರಾಯಲ್ಸ್ ತಂಡ ಸೇರಿಕೊಂಡಿದ್ದು ನನಗೆ ಒಳ್ಳೆಯ ಅವಕಾಶ ನೀಡಿದೆ. ಹೊಸ ಸವಾಲು ಹೇಗಿರಲಿದೆ ಎಂಬ ಬಗ್ಗೆ ರೋಮಾಂಚಿತನಾಗಿದ್ದೇನೆ. ಮೈದಾನದಲ್ಲಿ ಐಪಿಎಲ್ ತಂಡ ಭವಿಷ್ಯದಲ್ಲಿ ಬೇರೂರಲು ಅಭಿವೃದ್ಧಿ ಕ್ರಮಗಳನ್ನು ಮಾಡಲಿದ್ದೇನೆ. ಕ್ರಿಕೆಟ್ ಮೂಲ ಸೌಕರ್ಯಗಳತ್ತ ಗಮನ ಹರಿಸಲಿದ್ದೇನೆ,' ಎಂದು ಸಂಗಕ್ಕಾರ ಹೇಳಿದ್ದಾರೆ.
ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಕುಮಾರ ಸಂಗಕ್ಕಾರ, 134 ಟೆಸ್ಟ್ ಪಂದ್ಯಗಳಲ್ಲಿ 12400 ರನ್, 38 ಶತಕ, 404 ಏಕದಿನ ಪಂದ್ಯಗಳಲ್ಲಿ 14234 ರನ್, 25 ಶತಕ, 56 ಟಿ20ಐ ಪಂದ್ಯಗಳಲ್ಲಿ 1382 ರನ್ ಬಾರಿಸಿದ್ದಾರೆ. 71 ಐಪಿಎಲ್ ಪಂದ್ಯಗಳಲ್ಲಿ 1687 ರನ್ ದಾಖಲೆ ಹೊಂದಿದ್ದಾರೆ. ಐಪಿಎಲ್ನಲ್ಲಿ ಸಂಗಕ್ಕಾರ ಕಿಂಗ್ಸ್ XI ಪಂಜಾಬ್, ಡೆಕ್ಕನ್ ಚಾರ್ಜರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ್ದರು.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm