ಬ್ರೇಕಿಂಗ್ ನ್ಯೂಸ್
27-01-21 03:15 pm Source: MYKHEL Mahesh Malnad ಕ್ರೀಡೆ
ತಿರುವನಂತಪುರಂ, ಜನವರಿ 27: ಆನ್ ಲೈನ್ ಜೂಜು ಪರ ಪ್ರಚಾರ ಕೈಗೊಂಡ ಅನೇಕ ಸೆಲೆಬ್ರಿಟಿಗಳಿಗೆ ಮತ್ತೊಮ್ಮೆ ತೊಂದರೆ ಆರಂಭವಾಗಿದೆ. ಮದ್ರಾಸ್ ಹೈಕೋರ್ಟ್ ನಂತರ ಕೇರಳ ಹೈಕೋರ್ಟಿನಿಂದ ಬುಧವಾರದಂದು ಕ್ರಿಕೆಟರ್ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ, ನಟ ಅಜು ವರ್ಗೀಸ್ ಅವರಿಗೆ ನೋಟಿಸ್ ಜಾರಿಯಾಗಿದೆ.
ಐಪಿಎಲ್ ಸಂದರ್ಭದಲ್ಲಿ ಆನ್ಲೈನ್ ಜೂಜು ಪ್ರಚಾರ ಮಾಡುತ್ತಿರುವ ಈ ಸೆಲೆಬ್ರಿಟಿಗಳಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿವೆ ಸಾವು ನೋವು ಸಂಭವಿಸಿದೆ. ಆಪ್ ಆಧಾರಿತ ಜೂಜು ನಿಲ್ಲಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ತ್ರಿಶ್ಶೂರ್ ಮೂಲದ ಪಾಲಿ ವರ್ಗೀಸ್ ಎಂಬುವರು ಆನ್ ಲೈನ್ ರಮ್ಮಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಚಾರಣೆ ನಡೆಸಿದೆ.
ಆನ್ಲೈನ್ ಜೂಜು ಪರ ಪ್ರಚಾರ ಮಾಡುವ ಕ್ರಿಕೆಟರ್ಸ್ , ನಟ, ನಟಿಯರ ವಿರುದ್ಧದ ಈ ಪಿಐಎಲ್ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಎಲ್ಲರಿಗೂ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಬಗ್ಗೆ ವರದಿ ನೀಡುವಂತೆ ಪಿಣರಾಯಿ ವಿಜಯನ್ ಸರ್ಕಾರಕ್ಕೆ ಸೂಚಿಸಿದೆ. ಕೇರಳ ಗೇಮಿಂಗ್ ಕಾಯ್ದೆ 1960ರ ಅನ್ವಯ ಎಲ್ಲಾ ಬಗೆಯ ದುಡ್ಡು ಕಟ್ಟಿ ಆಡುವ ರಮ್ಮಿ ಗೇಮ್ ಮೇಲೆ ನಿಷೇಧ ಹೇರಬೇಕಾಗುತ್ತದೆ. ಆದರೆ, ಆನ್ ಲೈನ್ ಗೇಮ್ ರಮ್ಮಿ ಇದಕ್ಕೆ ಸೇರ್ಪಡೆಗೊಂಡಿಲ್ಲ, ಕಾಯ್ದೆ ತಿದ್ದುಪಡಿ ಮಾಡಿ ರಮ್ಮಿ ನಿಷೇಧ ಹೇರಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಬಹುಭಾಷಾ ನಟ ಸುದೀಪ್, ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ನಟಿ ತಮನ್ನಾ ಭಾಟಿಯಾ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಂತಾದವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೊಹ್ಲಿ ಹಾಗೂ ತಮನ್ನಾ ಮೊಬೈಲ್ ಪ್ರೀಮಿಯರ್ ಲೀಗ್ ಪರ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಸುದೀಪ್, ಗಂಗೂಲಿ ಮೈ11 ಸರ್ಕಲ್ ಪರ ಪ್ರಚಾರ ಮಾಡಿದ್ದಾರೆ. ಎಂಪಿಎಲ್ ಸದ್ಯ ಟೀಂ ಇಂಡಿಯಾದ ಕಿಟ್ ಪ್ರಾಯೋಜಕತ್ವ ಕೂಡಾ ಪಡೆದಿದೆ. ಫ್ಯಾಂಟಸಿ ಲೀಗ್ ಡ್ರೀಮ್11 ಸದ್ಯ ಐಪಿಎಲ್ ನ ಶೀರ್ಷಿಕೆ ಪ್ರಾಯೋಜಕತ್ವ ಪಡೆದುಕೊಂಡಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm