ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm