ಬ್ರೇಕಿಂಗ್ ನ್ಯೂಸ್
01-02-21 04:11 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗೆ ವಿಶ್ವ ಕ್ರಿಕೆಟ್ ಲೋಕವೇ ತಲೆದೂಗಿದೆ. ಈಗ ಈ ಗೆಲುವಿನ ಸಾಹಸಗಾಥೆ ಭಾರತದ ಕೇಂದ್ರ ಸರ್ಕಾರದ ಬಜೆಟ್ ಭಾಷಣದ ವೇಳೆಯಲ್ಲಿಯೂ ಉಲ್ಲೇಖವಾಗಿದೆ.
ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ಅನ್ನು ಪಾರ್ಲಿಮೆಂಟ್ನಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ಕ್ರಿಕೆಟ್ ತಂಡ ಸಾಧಿಸಿದ ಅಮೋಘ ಜಯವನ್ನು ನಿರ್ಮಲಾ ಸೀತಾರಾಮನ್ ಅವರು ಉದಾಹರಣೆಯಾಗಿ ನೀಡಿದರು.
ಕ್ರಿಕೆಟ್ಅನ್ನು ಪ್ರೀತಿಸುವ ದೇಶವಾಗಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಸ್ಮರಿಸಿಕೊಳ್ಳುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಸಾಧನೆಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು. "ಈ ಗೆಲುವು ನಮಗೆ ವ್ಯಕ್ತಿಗಳಾಗಿ ನಾವು ಅದರಲ್ಲೂ ವಿಶೇಷವಾಗಿ ನಮ್ಮ ಯುವಕರು ಹೊಂದಿರುವ ಸಾಮರ್ಥ್ಯ ಹಾಗೂ ಗೆಲುವನ್ನು ಪಡೆಯುವ ಸಲುವಾಗಿ ಹೇರಳವಾದ ಭರವಸೆಯನ್ನು ನಮಗೆ ನೆನಪಿಸಿದೆ" ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೀಮ್ ಇಂಡಿಯಾ ಮೊದಲ ಟೆಸ್ಟ್ನಲ್ಲಿ 36 ರನ್ಗೆ ಎರಡನೇ ಇನ್ನಿಂಗ್ಸ್ನಲ್ಲಿ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಆದರೆ ಈ ಸೋಲಿನಿಂದ ಅದ್ಭುತವಾಗಿ ತಿರುಗಿ ಬೀಳಲು ಯಶಸ್ವಿಯಾದ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಎರಡು ಪಂದ್ಯವನ್ನು ಗೆದ್ದು ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಮತ್ತೊಮ್ಮೆ ವಶಕ್ಕೆ ಪಡೆಯಲು ಯಶಸ್ವಿಯಾಗಿತ್ತು.
This News Article is a Copy of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm