ಬ್ರೇಕಿಂಗ್ ನ್ಯೂಸ್
01-02-21 05:17 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕಳೆದ ತಿಂಗಳು ಮೊದಲನೇ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಹೆತ್ತವರಾದ ಸಂಭ್ರಮದಲ್ಲಿರುವ ಈ ದಂಪತಿ ಈಗ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಅನುಷ್ಕಾ ಶರ್ಮಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪುತ್ರಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಪುತ್ರಿಗೆ "ವಮಿಕಾ" ಎಂದು ನಾಮಕರಣ ಮಾಡಿದ್ದಾರೆ. ಫೋಟೋ ಜೊತೆಗೆ ಸುಂದರ ಸಾಲುಗಳನ್ನು ಬರೆದುಕೊಂಡು ಅನುಷ್ಕಾ ತಮ್ಮ ಪುತ್ರಿಯ ಹೆಸರನ್ನು ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಹಂಚಿಕೊಂಡದ್ದಾರೆ.
"ನಾವು ಪ್ರೀತಿ, ಕೃತಜ್ಞತೆ ಉಪಸ್ಥಿತಿಯೊಂದಿಗೆ ಜೊತೆಯಾಗಿ ವಾಸಿಸುತ್ತಿದ್ದೇವೆ. ಆದರೆ ಈಗ ಪುಟ್ಟ ವಮಿಕಾ ಅದನ್ನು ಇನ್ನೊಂದು ಮಟ್ಟಕ್ಕೆ ತೆಗದುಕೊಂಡು ಹೋಗುತ್ತಿದ್ದಾಳೆ. ಕಣ್ಣೀರು, ನಗು, ಚಿಂತೆ, ಆನಂದ ಕೆಲವೊಮ್ಮೆ ನಿಮಿಷಗಳ ಅಂತರದಲ್ಲಿ ಅನುಭವಿಸಿದ ಭಾವನೆಗಳು" ಎಂದು ಅನುಷ್ಕಾ ಶರ್ಮಾ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. ಈ ಎಲ್ಲಾ ಭಾವನೆಗಳಿಗಿಂತ ಪುತ್ರಿಯ ಸಾಂಗತ್ಯ ಮಿಗಿಲು ಎಂಬರ್ಥದ ಸಾಲುಗಳನ್ನು ಅನುಷ್ಕಾ ಶರ್ಮ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಸದ್ಯ ಚೆನ್ನೈಗೆ ಬಂದಿಳಿದಿರುವ ವಿರಾಟ್ ಕೊಹ್ಲಿ ಹೋಟೆಲ್ ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಫೆಬ್ರವರಿ 5ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ವಿರಾಟ್ ಮತ್ತೆ ಟೀಮ್ ಇಂಡಿಯಾದ ಚುಕ್ಕಾಣಿ ಹಿಡಿಯಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಡಿಲೇಡ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಲ್ಗೊಂಡ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸಿಸ್ ವಿರುದ್ಧದ ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಜನವರಿ 11ರಂದು ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm