ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm