ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm