ಬ್ರೇಕಿಂಗ್ ನ್ಯೂಸ್
03-02-21 05:14 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಶ್ರೇಷ್ಠ ಮಟ್ಟದ ಪ್ರದರ್ಶನವನ್ನು ನೀಡಿ ಐತಿಹಾಸಿಕ ಸರಣಿ ಗೆಲುವನ್ನು ಸಾಧಿಸಿತ್ತು, ಆದರೆ ಆ ಗೆಲುವನ್ನು ಭಾರತ ಈಗ ಮರೆತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೊಸತಾಗಿ ಆರಂಭವನ್ನು ಪಡೆಯಬೇಕು ಎಂಬ ಸಲಹೆಯನ್ನು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ನೀಡಿದ್ದಾರೆ.
"ಭಾರತಕ್ಕೆ ಇದು ಹೊಸ ಸರಣಿ. ಆಸ್ಟ್ರೇಲಿಯಾದಲ್ಲಿ ಏನು ನಡೆದಿದೆಯೋ ಅದನ್ನು ಟೀಮ್ ಇಂಡಿಯಾ ಆಟಗಾರರು ಮರೆಯಬೇಕು. ಇಂಗ್ಲೆಂಡ್ ವಿರುದ್ಧ ಅವರು ಹೊಸತಾಗಿ ಆರಂಭಿಸಬೇಕಿದೆ" ಎಂದು ವಾಸಿಂ ಜಾಫರ್ ಇಂಗ್ಲೆಂಡ್ ವಿರುದ್ಧದ ಸರಣಿಯ ಬಗ್ಗೆ ಸಲಹೆ ನೀಡಿದ್ದಾರೆ.
"ಭಾರತಕ್ಕೆ ಖಂಡಿತವಾಗಿಯೂ ತವರು ಅಂಗಳದ ಲಾಭವನ್ನು ಪಡೆದುಕೊಳ್ಳಲಿದೆ. ಆದರೆ ಯಾವುದನ್ನೂ ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಆಸ್ಟ್ರೇಲಿಯಾದಲ್ಲಿ ನಡೆದಿರುವುದನ್ನು ನೀವು ಬಿಡಬೇಕಾಗುತ್ತದೆ. ಆ ಆತ್ಮವಿಶ್ವಾಸವನ್ನು ಮುಂದುವರಿಸಿಕೊಂಡು ಹೊಸ ಆರಂಭವನ್ನು ಪಡೆಯಬೇಕು" ಎಂದು ವಾಸಿಂಗ್ ಜಾಫರ್ ಪ್ರತಿಕ್ರಿಯಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಭಾರತೀಯ ಯುವ ಆಟಗಾರರ ಬಗ್ಗೆ ವಾಸಿಂಗ್ ಜಾಫರ್ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಶುಬ್ಮನ್ ಗಿಲ್ ಹಾಗೂ ರಿಷಭ್ ಪಂತ್ ಪ್ರದರ್ಶನವನ್ನು ಕೊಂಡಾಡಿದ ಜಾಫರ್ ಆಸ್ಟ್ರೇಲಿಯಾ ನೆಲದಲ್ಲಿ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ಟೆಸ್ಟ್ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸುತ್ತಾರೆ ಎಂದು ಊಹೆಯನ್ನೂ ಮಾಡಿರಲಿಲ್ಲ ಎಂದಿದ್ದಾರೆ.
"ಐಪಿಎಲ್ಗೆ ಮುನ್ನ ನಟರಾಜನ್ ಟೀಮ್ ಇಂಡಿಯಾಗೆ ಮೂರು ಮಾದರಿಯಲ್ಲೂ ಪದಾರ್ಪಣೆಯನ್ನು ಮಾಡಲಿದ್ದಾರೆ ಎಂದು ಯಾರು ಊಹಿಸಲು ಸಾಧ್ಯವಿತ್ತು. ಅವರೆಲ್ಲರೂ ಶ್ರೇಷ್ಠವಾದ ಪ್ರದರ್ಶನವನ್ನು ನೀಡಿದ್ದಾರೆ. ಅದು ಯುವ ಆಟಗಾರರ ಅದ್ಭುತವಾದ ಪ್ರದರ್ಶನ. ನನಗೆ ಈ ಹುಡುಗರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಅದ್ಭುತವಾಗಿ ಆಡಲಿದ್ದಾರೆ ಎಂಬ ಸಂಪೂರ್ಣ ಭರವಸೆಯಿದೆ" ಎಂದು ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಟೀಮ್ ಇಂಡಿಯಾ ಆಟಗಾರರ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm