ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm