ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm