ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm