ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm