ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm