ಬ್ರೇಕಿಂಗ್ ನ್ಯೂಸ್
15-02-21 02:50 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್ಐಆರ್ ದಾಖಲಾಗಿದೆ.
2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹರ್ಯಾಣದ ಹಿಸಾರ್ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್ಐಆರ್ ದಾಖಲಾಗಿದೆ.
This News Article is a Copy of MYKHEL
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm