ಬ್ರೇಕಿಂಗ್ ನ್ಯೂಸ್
26-02-21 11:03 am Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಚೆನ್ನಾಗೇ ಇತ್ತು ಆದರೆ, ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ಗುಣಮಟ್ಟ ಚೆನ್ನಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಮುಕ್ತಾಯದ ಬಳಿಕ ಕೊಹ್ಲಿ ಈ ಹೇಳಿಕೆ ನೀಡಿದ್ದಾರೆ.
ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟಿಂಗ್ ಪ್ರದರ್ಶನ ಚೆನ್ನಾಗಿರಲಿಲ್ಲ. ನಾಲ್ಕೂ ಇನ್ನಿಂಗ್ಸ್ಗಳಲ್ಲಿ ಒಬ್ಬರೂ ಕೂಡ ಗಮನಾರ್ಹ ಬ್ಯಾಟಿಂಗ್ ತೋರಿರಲಿಲ್ಲ. ಪಿಚ್ ಬಹುತೇಕ ಬೌಲರ್ಗಳಿಗೆ ಅದರಲ್ಲೂ ಸ್ಪಿನ್ಗೆ ಅನುಕೂಲಕರ ಪಿಚ್ನಂತಿತ್ತು. ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಸೋಲನುಭವಿಸಿತ್ತು.
ಭಾರತ-ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಕ್ರೀಸ್ನಲ್ಲಿ ನಿಲ್ಲಲು ಪರದಾಡುತ್ತಿದ್ದನ್ನು ಕಂಡು ಅನೇಕ ಕ್ರಿಕೆಟ್ ಪರಿಣಿತರು ಪಿಚ್ ಬಗ್ಗೆ ಅಸಮಾಧಾನ ತೋರಿಕೊಂಡಿದ್ದರು. ಟೆಸ್ಟ್ ಪಂದ್ಯಕ್ಕೆ ಮೊಟೆರಾ ಪಿಚ್ ಯೋಗ್ಯವಲ್ಲ ಎಂದು ಹೇಳಿಕೊಂಡಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ಕೂಡ ಇಂಥದ್ದೇ ಹೇಳಿಕೆ ನೀಡಿದ್ದರು. ಆದರೆ ಕೊಹ್ಲಿ ಇದಕ್ಕೆ ವಿರುದ್ಧ ಹೇಳಿಕೆ ನೀಡಿದ್ದಾರೆ.
'ಪ್ರಾಮಾಣಿಕವಾಗಿ ಹೇಳೋದಾದ್ರೆ, ಗುಣಮಟ್ಟದ ಮಟ್ಟಕ್ಕೆ ಬ್ಯಾಟಿಂಗ್ ಗುಣಮಟ್ಟ ಇರಲಿಲ್ಲ. ನಾವು 100 ರನ್ ಹೊತ್ತಿಗೆ 3 ವಿಕೆಟ್ ಕಳೆದುಕೊಂಡಿದ್ದೆವು. 150ಕ್ಕೂ ಕಡಿಮೆ ರನ್ ವೇಳೆಗೆ ಆಲ್ ಔಟ್ ಆಗಿದ್ದೆವು. ಚೆಂಡು ತಿರುಗುತ್ತಿತ್ತು ಅನ್ನೋದು ಬಿಟ್ಟರೆ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಲು ಪಿಚ್ ಚೆನ್ನಾಗಿತ್ತು,' ಎಂದು ಕೊಹ್ಲಿ ಹೇಳಿದ್ದಾರೆ.
This News Article is a Copy of MYKHEL
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm